ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನ ರಾಮಂತಪುರದ ಗೋಕುಲೇನಗರದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ.
ಮೃತರನ್ನು ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (15) ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಶ್ರೀಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಲಾಗುತ್ತಿತ್ತು ಈ ವೇಳೆ ರಥವನ್ನು ಎಳೆಯುತ್ತಿದ್ದ ವಾಹನ ಕೆಟ್ಟು ನಿಂತಿದ್ದರಿಂದ, ಯುವಕರೆಲ್ಲರೂ ಸೇರಿ ಕೈಯಿಂದಲೇ ದೂಡಿಕೊಂಡು ಮೆರವಣಿಗೆ ಮುನ್ನೆಡೆಸುತ್ತಿದ್ದ ಸಂದರ್ಭ ರಥ ರಸ್ತೆ ಬದಿ ಹಾದುಹೋದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಈ ವೇಳೆ ರಥ ದೂಡುತ್ತಿದ್ದ 9 ಮಂದಿಗೆ ವಿದ್ಯುತ್ ಆಘಾತವಾಗಿದೆ. ಪರಿಣಾಮ 5 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದರೆ ನಾಲ್ಕು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…