Featured

ಹೊಟ್ಟೆಪಾಡಿಗಾಗಿ ಜಾತ್ರೆಗಳಲ್ಲಿ ವ್ಯಾಪಾರ ಮಾಡುವವರಿಗೆ ನಿಷೇಧ ಹೇರುವುದು ಸಂವಿಧಾನ ವಿರೋಧಿ ನಿಲುವಾಗಿದೆ : ರಮೇಶ ಕಾಂಚನ್ – Vishwanews24

ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಬಡವರು..

ಅವರಲ್ಲಿ ಯಾವುದೇ ರೀತಿಯ ಜಾತಿ ಭೇದವಿಲ್ಲ..

ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಅವರು ಅವರ ಹಾಗೂ ಅವರ ಕುಟುಂಬದ ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುತ್ತಾರೆ..

ಉಡುಪಿ: ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಬಡವರು. ಅವರಲ್ಲಿ ಯಾವುದೇ ರೀತಿಯ ಜಾತಿ ಭೇದವಿಲ್ಲ. ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಅವರು ಅವರ ಹಾಗೂ ಅವರ ಕುಟುಂಬದ ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುತ್ತಾರೆ. ಇಂತಹ ವ್ಯಾಪಾರಿಗಳಿಗೆ ನಿಷೇಧ ಹೇರುವುದು ಸಂವಿಧಾನ ವಿರೋಧಿ ನಿಲುವಾಗಿದೆ ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಹೇಳಿದ್ದಾರೆ.

ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಎಲ್ಲಾ ಧರ್ಮಗಳ ಜಾತ್ರೆಯಲ್ಲಿ ಇರುತ್ತಾರೆ. ಎಲ್ಲಾ ಧರ್ಮದಲ್ಲಿಯೂ ಇಂತಹ ವ್ಯಾಪಾರಸ್ಥರನ್ನು ನಾವು ನೋಡಬಹುದು. ಇತ್ತೀಚಿನ ದಿನಗಳಲ್ಲಿ ಒಂದು ಧರ್ಮದ ಧಾರ್ಮಿಕ ಕಾರ್ಯಕ್ರಮಕ್ಕೆ ಇನ್ನೊಂದು ಧರ್ಮದವರನ್ನು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಹೇಳುವುದು ಸೌಹಾರ್ದತೆಗೆ ಧಕ್ಕೆ ತರುವಂತದಾಗಿದೆ ಹಾಗೂ ಸಂವಿಧಾನ ವಿರೋಧಿ ನಿಲುವು ಆಗಿರುತ್ತದೆ. ಈಗಾಗಲೇ ಕೊರೋನಾ ಎಂಬ ಮಹಾಮಾರಿಯಿಂದ ಜನರಿಗೆ ಬದುಕಲು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಬಡ ವ್ಯಾಪಾರಸ್ಥರಿಗೆ ತಮ್ಮ ದಿನನಿತ್ಯದ ಅವಶ್ಯಕತೆಗೊಸ್ಕರ ವ್ಯಾಪಾರ ಮಾಡಲು ಜಿಲ್ಲಾಡಳಿತ ಮತ್ತು ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ಯಾವುದೇ ಜಾತಿ, ಮತಭೇದ ನೋಡದೆ ಈ ಬಡ ಬೀದಿ ಬದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸಬೇಕಾಗಿ ಆಗ್ರಹಿದ್ದಾರೆ.

ಇದೇ ಸಂದರ್ಭದಲ್ಲಿ ಮುಲ್ಕಿಯ ಪ್ರಸಿದ್ಧ ದೇವಸ್ಥಾನವಾದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮಂಡಳಿಯು ತೆಗೆದುಕೊಂಡ ನಿರ್ಧಾರವು ಸೌಹಾರ್ದತೆಯನ್ನು ಮೂಡಿಸುವಂತದಾಗಿದೆ. ಈ ನಿಲುವನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

24 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago