ಬೆಂಗಳೂರು: ಪೊಲೀಸರೆಂದರೆ ನೋಡಲು ಫಿಟ್ ಆಗಿರಬೇಕು. ಕೆಲಸಕ್ಕೆ ಸೇರಲು ಸಾಕಷ್ಟು ವರ್ಕೌಟ್ ಮಾಡುವ ಪೊಲೀಸರು ಕೆಲಸ ಸಿಕ್ಕಿದ ಬಳಿಕ ಬಹುತೇಕರು ಹೊಟ್ಟೆ ಬೆಳೆಸಿಕೊಳ್ಳುತ್ತಾರೆ. ಅಂತಹ ಪೊಲೀಸರಿಗೆ ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿರುವ ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಹೊಟ್ಟೆ ಮುಂದಕ್ಕೆ ಬಿಟ್ಟುಕೊಂಡಿದ್ರೆ ಅತ್ಯುನ್ನತ ಪದಕಗಳಿಗೆ ಶಿಫಾರಸ್ಸು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇನ್ಮೇಲೆ ಮುಖ್ಯಮಂತ್ರಿ ಪದಕ ಅಥವಾ ರಾಷ್ಟ್ರಪತಿ ಪದಕವಾಗಲಿ ಹೊಟ್ಟೆ ಇರುವವರಿಗೆ ಸಿಗುವುದಿಲ್ಲ ಎಂದು ಎಚ್ಚರಿಸಿರುವ ಅಲೋಕ್ ಕುಮಾರ್ ಎರಡು ತಿಂಗಳಲ್ಲಿ ಹೊಟ್ಟೆ ಕರಿಗಿಸಿಲ್ಲ ಅಂದ್ರೆ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.
ಬೆಂಗಳೂರು ಕೆಎಸ್ಆರ್ಪಿಯಲ್ಲಿ 1010 ಜನ ಸಿಬ್ಬಂದಿ ಇದ್ದಾರೆ. ಅದರಲ್ಲಿ 162 ಸಿಬ್ಬಂದಿಗೆ ಭಾರೀ ಹೊಟ್ಟೆ ಇದೆ. ಹೀಗಾಗಿ ಅವರನ್ನು ಗ್ರೌಂಡ್ನಲ್ಲಿ ನಿಲ್ಲಿಸಿ ವಾರ್ನ್ ಮಾಡಿದ್ದಾರೆ. ಏನ್ ಮಾಡ್ತಿರೋ ಗೊತ್ತಿಲ್ಲ, ಇನ್ನು ಎರಡು ತಿಂಗಳಲ್ಲಿ ಹೊಟ್ಟೆ ಕರಗಿಸಲೇಬೇಕು ಎಂದು ಅಲೋಕ್ ಕುಮಾರ್ ಗಡುವು ನೀಡಿದ್ದಾರೆ.
ಹೊಟ್ಟೆ ಬಿಟ್ಟಿಕೊಂಡಿರುವುದನ್ನು ಕರಗಿಸುವ ಜತೆಗೆ ತೂಕದ ಮಿತಿಯನ್ನು ಅಲೋಕ್ ಕುಮಾರ್ ನೀಡಿದ್ದಾರೆ. 175 ಸೆ.ಮೀ ಉದ್ದ ಇದ್ರೆ ಅವರು 75 KG ತೂಕದ ಜತೆಗೆ 10 ಕೆಜಿ ವಿನಾಯತಿ ಅಂದ್ರೆ 85 ಕೆ.ಜಿ ಇರಬಹುದು. 185 ಸೆ.ಮೀ ಉದ್ದ ಇದ್ರೆ 10 ಕೆ.ಜಿ ವಿನಾಯತಿ ಸೇರಿ 95 ಕೆ.ಜಿ ಇರಬಹುದು. ರಾಜ್ಯಾಂದ್ಯಂತ ಇರೋ ಕೆಎಸ್ಆರ್ಪಿ ಸಿಬ್ಬಂದಿಯಲ್ಲಿ ಹೆಚ್ಚು ತೂಕ ಇರೋರು ತೂಕ ಇಳಿಸುವಂತೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
ಡೊಳ್ಳು ಹೊಟ್ಟೆ ಕರಗಿಸದಿದ್ದರೆ ಅಂತಹ ಪೊಲೀಸರಿಗೆ ರಾಷ್ಟಪತಿ ಪದಕ ಸಿಗುವುದಿಲ್ಲ. ರಾಷ್ಟ್ರಪತಿ ಪದಕ ಶಿಫಾರಸ್ಸಿಗೆ ಫಿಟ್ ಅಂಡ್ ಫೈನ್ ಆಗಿರಲೇಬೇಕು. ಉತ್ತಮ ಸೇವೆ ಜತೆಗೆ ಸದೃಢ ಆರೋಗ್ಯ ಹೊಂದಿರಲೇಬೇಕು. ಇದಕ್ಕೆ ಪೂರಕವೆಂಬಂತೆ ಮೂರು ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿತ್ತು. ಪದಕಕ್ಕಾಗಿ ತಮ್ಮ ಸಾಧನೆ ಜತೆಗೆ ವೈದ್ಯಕೀಯ, ಮಾನಸಿಕ ಹಾಗೂ ದೈಹಿಕ ಕ್ಷಮತೆ ಪ್ರಮಾಣಪತ್ರ ಸಲ್ಲಿಸಬೇಕು. ಮುಖ್ಯಮಂತ್ರಿಗಳ ಪೊಲೀಸ್ ಪದಕಕ್ಕೂ ಮುಂದಿನ ದಿನಗಳಲ್ಲಿ ಪ್ರಮುಖ ಮಾನದಂಡವಾಗಲಿದೆ. ಕೆಎಸ್ಆರ್ಪಿ 12 ಪ್ಲಾಟೂನ್ಗಳಲ್ಲಿ ನಿಗದಿತ ಅವಧಿಯಲ್ಲಿ ಡೊಳ್ಳು ಹೊಟ್ಟೆ ಕರಗಿಸಲು ಸಿಬ್ಬಂದಿಗೆ ತಾಕೀತು ಮಾಡಲಾಗಿದೆ.
ಡೊಳ್ಳು ಹೊಟ್ಟೆ ಕರಗಿಸದವರಿಗೆ ನಿತ್ಯ ವ್ಯಾಯಾಮ, ಪರೇಡ್ ಸೇರಿದಂತೆ ದೈಹಿಕ ವ್ಯಾಯಾಮ ಜತೆಗೆ ಜಾಗಿಂಗ್ ಹಾಗೂ ಈಜು ಕಡ್ಡಾಯಪಡಿಸಲಾಗಿದೆ. ಈ ಬಾರಿ ಐದು ಸಿಬ್ಬಂದಿಗೆ ಮಾತ್ರ ರಾಷ್ಟ್ರಪತಿ ಪದಕಕ್ಕೆ ಶಿಫಾರಸ್ಸು ಮಾಡಲಾಗಿದೆ. ಡೊಳ್ಳು ಹೊಟ್ಟೆ ಕರಗಿಸಿ ಸದೃಢ ಆರೋಗ್ಯ ಹೊಂದಿದವರಿಗೆ ಮಾತ್ರ ರಾಷ್ಟ್ರಪತಿ ಪದಕ ಸಿಗಲಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…