ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ದಂಧೆ ನಡೆಸುತ್ತಿದ್ದ, ಹೊರರಾಜ್ಯಗಳಿಂದ ಯುವತಿಯರನ್ನ ಕರೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಜನವರಿಯಲ್ಲೇ ಕೆ.ಆರ್ ಪುರದ ಟಿನ್ ಫ್ಯಾಕ್ಟರಿ ಬಳಿಯಿದ್ದ ನಿರ್ವಣ ಇಂಟರ್ನ್ಯಾಷನಲ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಥೈಲ್ಯಾಂಡ್ ಮಹಿಳೆಯರು ಸೇರಿದಂತೆ 44 ಮಹಿಳೆಯರನ್ನ ರಕ್ಷಣೆ ಮಾಡಲಾಗಿತ್ತು. ದಾಳಿ ಬಳಿಕ ಸ್ಪಾ ಅನ್ನು ಬಂದ್ ಮಾಡಲಾಗಿತ್ತು.
ಇನ್ನೂ ಆರೋಪಿಯು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಿಂದ ಯುವತಿಯರನ್ನ ಕರೆಸುತ್ತಿದ್ದ. ಬೆಂಗಳೂರಿನಲ್ಲಿ ಕೆಲಸಕ್ಕೆಂದು ಕರೆಸಿ ಬಂದು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಅನಿಲ್ ರೆಡ್ಡಿ ವಿರುದ್ಧ ರೇಪ್ ಸೇರಿ ಇತರೇ ಪ್ರಕರಣಗಳು ದಾಖಲಾಗಿದ್ದರಿಂದ, ಮಹದೇವಪುರ ಪೊಲೀಸರು ಗೂಂಡಾ ಕಾಯ್ದೆ ರಿಪೋರ್ಟ್ ತಯಾರಿಸಿದ್ದರು. ವರದಿ ಆಧರಿಸಿ ಪೊಲೀಸ್ ಆಯುಕ್ತರು ಅನಿಲ್ ರೆಡ್ಡಿ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಪೊಲೀಸರು ಕಂಪ್ಲೀಟ್ ಮಾಹಿತಿ ನೀಡಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…