ಬೆಂಗಳೂರು: ಮೈಸೂರಿಗೆ ದರ್ಶನ್ ತೆರಳಲು ಮತ್ತು ಪವಿತ್ರಾ ಗೌಡಗೆ ಹೊರ ರಾಜ್ಯಕ್ಕೆ ಹೋಗಲು ಕೋರ್ಟ್ ಅನುಮತಿ ನೀಡಿದೆ.
57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ದರ್ಶನ್ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ನೀಡಬೇಕೆಂದು ಕೇಳಿದ್ದರು. ಪವಿತ್ರಾ ಗೌಡ ಪರ ವಕೀಲರು ಹೊರ ರಾಜ್ಯಕ್ಕೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.
ಈ ಎರಡು ಅರ್ಜಿಗಳನ್ನು ಕೋರ್ಟ್ ಮಾನ್ಯ ಮಾಡಿದೆ. ದರ್ಶನ್ಗೆ ಜ.12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅನುಮತಿ ನೀಡಿದೆ.
ಕೋರ್ಟ್ ಮುಂಬೈ ಮತ್ತು ದೆಹಲಿಗೆ ತೆರಳಲು ಪವಿತ್ರಾ ಗೌಡಗೆ ಅನುಮತಿ ನೀಡಿದೆ. ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು.
ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಎಲ್ಲಾ 17 ಆರೋಪಿಗಳು ಹಾಲ್ಗೆ ಬಂದ ನಂತರ ನ್ಯಾಯಾಧೀಶರು ಹಾಜರಿ ಪಡೆದರು. ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಫೆ. 25ಕ್ಕೆ ಮುಂದೂಡಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…