ಉಡುಪಿ: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ಉಡುಪಿಗೆ ಬಂದ ಬಗ್ಗೆ ತನಿಖೆ ವೇಳೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಉಡುಪಿಗೆ ಬಂದು ವಿಚಾರಣೆ ನಡೆಸಿದ್ದರು ಎಂದರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದ್ದಾರೆ.
ಶಂಕಿತ ಉಗ್ರ ಶಾರಿಕ್ ಉಡುಪಿ ಕೃಷ್ಣ ಮಠ ಪರಿಸರದಲ್ಲಿ ಸಂಚರಿಸಿರುವ ವಿಚಾರದ ಕುರಿತಂತೆ ಹೇಳಿಕೆ ನೀಡಿರುವ ಅವರು, ಉಡುಪಿ ಪೊಲೀಸರು ಈ ಪ್ರಕರಣದ ತನಿಖಾಧಿಕಾರಿಗಳಲ್ಲ. ಮಂಗಳೂರು ಪೊಲೀಸರೇ ತನಿಖೆ ನಡೆಸಿ ಹೋಗಿದ್ದಾರೆ. ಅವರೇ ಈ ವಿಚಾರದ ಕುರಿತು ಮಾಹಿತಿ ನೀಡುತ್ತಾರೆ ಎಂದರು.
ಕಾರ್ಮಿಕರಾಗಿ ಜಿಲ್ಲೆಗೆ ಬರುವವರ ದಾಖಲೆ ಸತ್ಯಾಸತ್ಯತೆ ಪರಿಶೀಲನೆ ವಿಚಾರವಾಗಿ ಮಾತನಾಡಿದ ಅವರು, ಉಡುಪಿಯ ಮಲ್ಪೆ ಭಾಗಕ್ಕೆ ಹೊರ ರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಇನ್ನು ಮೀನುಗಾರಿಕಾ ಬೋಟುಗಳಲ್ಲಿ ಮತ್ತು ಮೀನು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಹೊರ ರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಬಲೆ ನೇಯುವ ಕಾರ್ಖಾನೆ, ಐಸ್ ಫ್ಯಾಕ್ಟರಿಗಳಲ್ಲಿಯೂ ದುಡಿಯುವವರಿದ್ದಾರೆ. ಈ ಹಿನ್ನೆಲೆಯಲ್ಲಿ ಮೀನುಗಾರ ಸಂಘಟನೆಗಳೊಂದಿಗೆ ಈಗಾಗಲೇ ಮಾತನಾಡಲಾಗಿದ್ದು, ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಎಲ್ಲಾ ವಿವರ ಸಂಗ್ರಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ತಾತ್ಕಾಲಿಕ ನೆಲೆಯಲ್ಲಿ ಕಾರ್ಮಿಕರು ಬಂದರೂ ಮಾಹಿತಿ ಸಂಗ್ರಹ ಕಡ್ಡಾಯ. ಆಯಕಟ್ಟಿನ ಸ್ಥಳಗಳಲ್ಲಿ ಮತ್ತಷ್ಟು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.ಮೀನುಗಾರ ಮುಖಂಡರಿಂದಲೂ ಮಾಹಿತಿ ಸಂಗ್ರಹಿಸುತ್ತೇವೆ. ತಂತ್ರಜ್ಞಾನ ಆಧಾರಿತ ನಿರ್ವಹಣೆ ಮಾಡುತ್ತೇವೆ ಎಂದರು.
ಮಂಗಳೂರು ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಹತ್ತು ಹಲವಾರು ದೇವಸ್ಥಾನಗಳ ಭದ್ರತೆಯ ಬಗ್ಗೆ ಚರ್ಚಿಸಿದ್ದೇವೆ. ದೇವಸ್ಥಾನಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಮಾಡುತ್ತೇವೆ.ನಿಯಮಿತವಾಗಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ. ಮುಜರಾಯಿ ದೇವಸ್ಥಾನಗಳಿಗೆ ಹೊರತಾಗಿ ಭಕ್ತರು ಹೆಚ್ಚು ಬರುವ ದೇವಸ್ಥಾನಗಳ ಬಗ್ಗೆ ನಿಗಾ ಇರಿಸುತ್ತೇವೆ. ಪಬ್ಲಿಕ್ ಸೇಫ್ಟಿ ಆಕ್ಟ್ ಅನುಸಾರ ನಿರ್ದೇಶನ ನೀಡುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಯವರು ವಿವರಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…