Featured

ಹೊಸದಾಗಿ ಸರಕಾರಿ ಜಮೀನು ಒತ್ತುವರಿ ಪ್ರಕರಣ ಪತ್ತೆಹಚ್ಚಿ, ಅತಿಕ್ರಮಣ ತೆರವುಗೊಳಿಸಿ ಪ್ರಕರಣ ದಾಖಲಿಸಿ- ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ- vishwanews24

ಹೊಸದಾಗಿ ಸರಕಾರಿ ಜಮೀನು ಒತ್ತುವರಿ ಪ್ರಕರಣ ಪತ್ತೆಹಚ್ಚಿ, ಅತಿಕ್ರಮಣ ತೆರವುಗೊಳಿಸಿ ಪ್ರಕರಣ ದಾಖಲಿಸಿ- ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಅತಿಕ್ರಮಣವನ್ನು ತೆರವುಗೊಳಿಸಬೇಕು.
ಸದ್ರಿ ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ, ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ವಹಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮ ವಹಿಸಲು ಪ್ರಸ್ತಾವನೆ ಸಲ್ಲಿಸಬೇಕು.
ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂನ್ 11 ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್‌ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago