ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ.
ವಿಶೇಷ ಆಹ್ವಾನಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಶಕ್ತಿನಗರ ನಾಲ್ಯಪದವು ಕುವೆಂಪು ಕೇಂದ್ರೀಯ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ ಅದೇ ಶಾಲೆಯ ಶಿಕ್ಷಕಿ ಶ್ವೇತಾ ಕೆ ಅವರಿಗೆ ಆಮಂತ್ರಣ ದೊರಕಿದೆ.
ಅದೇ ರೀತಿ, ಕರ್ನಾಟಕದ ಪಂಚಾಯತ್ಗಳ ಆರು ಮಹಿಳಾ ಅಧ್ಯಕ್ಷರನ್ನು ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ. ಅವರಲ್ಲಿ ಒಬ್ಬರು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ.
ಪೂರ್ವಿ ಯು. ಅವರು ಶಕ್ತಿನಗರದ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಉಮೇಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಪುತ್ರಿ. ಪಠ್ಯಕ್ರಮ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತೆಯಾಗಿರುವ ಈಕೆಯನ್ನು ಆಯ್ಕೆ ಮಾಡಲಾಗಿದೆ.
ಕಲಬುರಗಿ, ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಶಿಕ್ಷಣ ವಿಭಾಗದಿಂದ ಒಟ್ಟು ಎಂಟು ಮಂದಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…