ಬಂಟ್ವಾಳ/ಉಡುಪಿ: ದೇಶದ ಬುಡಕಟ್ಟು ಜನಾಂಗದ ಸ್ವಸಹಾಯ ಗುಂಪುಗಳ ಸದಸ್ಯರು ಮಾ. 31ರಂದು ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿಗಳನ್ನು ಭೇಟಿಯಾಗಿ ಸಂವಾದ ನಡೆಸಲಿದ್ದು, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕು ಹಾಗೂ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ತಲಾ ಮೂವರು ಮಹಿಳೆಯರು ಭಾಗವಹಿಸುತ್ತಿದ್ದಾರೆ. ಇವರು ಸ್ವ ಉದ್ಯೋಗದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಆಯ್ಕೆ ಮಾಡಲಾಗಿದೆ.
ವಿಟ್ಲದ ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ, ಅಮಿತಾ ಅವರು ಕನ್ಯಾನ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದು, ಅಣಬೆ ಕೃಷಿ, ಮಲ್ಲಿಗೆ ಕೃಷಿ, ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಇಂದ್ರಾವತಿ ಅವರು ಹಪ್ಪಳ, ಸಂಡಿಗೆ ತಯಾರಿಸಿ ಮಾರುವ ಜತೆಗೆ ಟೈಲರಿಂಗ್ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ.
ಉಡುಪಿ, ಬ್ರಹ್ಮಾವರ ತಾಲೂಕಿನ ಸ್ವಾಮಿ ಕೊರಗಜ್ಜ ಸಂಜೀವಿನಿ ಸಂಘದ ಸದಸ್ಯರಾದ ಅನಿತಾ ಎಸ್., ಬೈಂದೂರು ತಾಲೂಕಿನ ದುರ್ಗಾಶ್ರೀ ಸಂಜೀವಿನಿ ಸಂಘದ ಸದಸ್ಯರಾದ ಗಿರಿಜಾ, ಗೀತಾ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಈ ಮೂವರೂ ಗುರುವಾರವೇ ಬೆಂಗಳೂರಿಗೆ ತೆರಳಿ, ಅಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಸಂಜೆ ವಿಮಾನದಲ್ಲಿ ದಿಲ್ಲಿ ತಲುಪಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…