ಹೊಸದಿಲ್ಲಿ: ಬಿಜೆಪಿ ಸಂಸದ ಗೌತಮ್ ಗಂಭೀರ ವಿನೂತನ ಕ್ಯಾಂಟೀನ್ವೊಂದನ್ನು ತಮ್ಮ ಹಣದಿಂದಲೇ ತೆರೆದಿದ್ದು, ಈ ಹೋಟೆಲ್ನಲ್ಲಿ ಒಂದು ರೂಪಾಯಿಗೆ ಊಟ ಸಿಗುತ್ತಿದೆ.
ಜನ ರಸೋಯಿ ಎಂಬ ಹೆಸರಿನ ಕ್ಯಾಂಟೀನ್ವೊಂದನ್ನು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಆರಂಭಿಸಿದ್ದು, ಬಡವರಿಗೆ ಎರಡು ಹೊತ್ತು ಊಟ ಸಿಗಬೇಕು ಎನ್ನುವ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಿರುವುದಾಗಿ ಗಂಭೀರ್ ಮಾಹಿತಿ ನೀಡಿದ್ದಾರೆ. ಕಡು ಬಡವರು ದಿನಕ್ಕೆ ಎರಡು ಹೊತ್ತಿನ ಊಟಕ್ಕೂ ಪರದಾಡುವುದನ್ನು ನೋಡಿ ನಾನು ಬೇಸರಗೊಂಡಿದ್ದೆ. ಇದಕ್ಕಾಗಿ ಗಾಂಧಿನಗರದಲ್ಲಿ ಸುಸಜ್ಜಿತವಾದ ‘ಜನ್ ರಸೋಯಿ’ ಆಧುನಿಕ ಕ್ಯಾಂಟೀನ್ ಆರಂಭಿಸಲಾಗಿದೆ.
ಅಗತ್ಯವಿರುವವರು ಇಲ್ಲಿಗೆ ಬಂದು 1 ರೂಪಾಯಿ ನೀಡಿ ಊಟ ಮಾಡಬಹುದು’ ಎಂದು ಗಂಭೀರ್ ತಿಳಿಸಿದ್ದಾರೆ. ಮುಂದಿನ ಗಣರಾಜ್ಯೋತ್ಸವದ ದಿನ ದಿಲ್ಲಿಯ ಅಶೋಕನಗರದಲ್ಲಿ ಮತ್ತೊಂದು ಕ್ಯಾಂಟೀನ್ ಆರಂಭಿಸುವುದಾಗಿಯೂ ಗೌತಮ್ ಗಂಭೀರ್ ತಿಳಿಸಿದ್ದಾರೆ. ಜಾತಿ, ಮತ, ಧರ್ಮ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬರಿಗೂ ಆರೋಗ್ಯಕರ ಮತ್ತು ಶುಚಿತ್ವವಿರುವ ಆಹಾರ ಸಿಗಬೇಕು ಎಂದು ನಾನು ಭಾವಿಸುತ್ತೇನೆ.
ದಿಲ್ಲಿಯ ಪ್ರತಿಯೊಬ್ಬ ವ್ಯಕ್ತಿಗೆ ಆರೋಗ್ಯಕರ ಆಹಾರ ಮತ್ತು ಶುದ್ಧ ನೀರನ್ನು ಪಡೆಯುವ ನನ್ನ ಕನಸು ನನಸಾಗುವ ವರೆಗೆ ನಾನು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ. ಪೂರ್ವ ದಿಲ್ಲಿಯ ಗಾಂಧಿನಗರದಲ್ಲಿ ಈ ಕ್ಯಾಂಟೀನ್ ಇದ್ದು, ಸಂಪೂರ್ಣ ಅಭಿವೃದ್ಧಿ ಹೊಂದಿದ ಖಾಸಗಿ ಕ್ಯಾಂಟೀನ್ ಇದಾಗಿದೆ. ಇತರೆ ಹೋಟೆಲ್ಗಿಂತಲೂ ಕಮ್ಮಿ ಇಲ್ಲವೆಂಬಂತೆ ನಿರ್ಮಾಣಗೊಂಡಿದೆ. ಈ ಕ್ಯಾಂಟೀನ್ನ ಸಂಪೂರ್ಣ ವೆಚ್ಚವನ್ನು ಗೌತಮ್ ಗಂಭೀರ್ ನೋಡಿಕೊಳ್ಳುತ್ತಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…