Categories: ಉಡುಪಿ

ಹೊಸದಿಲ್ಲಿ: ಸ್ವಂತ ಹಣದಿಂದ ಬಡವರಿಗಾಗಿ 1 ರೂ.ಗೆ ಊಟದ ಕ್ಯಾಂಟಿನ್‌ ತೆರೆದ  ಗೌತಮ್ ಗಂಭೀರ್‌ -Vishwanews24

ಹೊಸದಿಲ್ಲಿ: ಸ್ವಂತ ಹಣದಿಂದ ಬಡವರಿಗಾಗಿ 1 ರೂ.ಗೆ ಊಟದ ಕ್ಯಾಂಟಿನ್‌ ತೆರೆದ  ಗೌತಮ್ ಗಂಭೀರ್‌ -Vishwanews24

ಹೊಸದಿಲ್ಲಿ: ಬಿಜೆಪಿ ಸಂಸದ ಗೌತಮ್‌ ಗಂಭೀರ ವಿನೂತನ ಕ್ಯಾಂಟೀನ್‌ವೊಂದನ್ನು ತಮ್ಮ ಹಣದಿಂದಲೇ ತೆರೆದಿದ್ದು, ಈ ಹೋಟೆಲ್‌ನಲ್ಲಿ ಒಂದು ರೂಪಾಯಿಗೆ ಊಟ ಸಿಗುತ್ತಿದೆ.

ಜನ ರಸೋಯಿ ಎಂಬ ಹೆಸರಿನ ಕ್ಯಾಂಟೀನ್‌ವೊಂದನ್ನು ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಆರಂಭಿಸಿದ್ದು, ಬಡವರಿಗೆ ಎರಡು ಹೊತ್ತು ಊಟ ಸಿಗಬೇಕು ಎನ್ನುವ ಉದ್ದೇಶದಿಂದ ಈ ಕ್ಯಾಂಟೀನ್‌ ಆರಂಭಿಸಿರುವುದಾಗಿ ಗಂಭೀರ್‌ ಮಾಹಿತಿ ನೀಡಿದ್ದಾರೆ. ಕಡು ಬಡವರು ದಿನಕ್ಕೆ ಎರಡು ಹೊತ್ತಿನ ಊಟಕ್ಕೂ ಪರದಾಡುವುದನ್ನು ನೋಡಿ ನಾನು ಬೇಸರಗೊಂಡಿದ್ದೆ. ಇದಕ್ಕಾಗಿ ಗಾಂಧಿನಗರದಲ್ಲಿ ಸುಸಜ್ಜಿತವಾದ ‘ಜನ್ ರಸೋಯಿ’ ಆಧುನಿಕ ಕ್ಯಾಂಟೀನ್ ಆರಂಭಿಸಲಾಗಿದೆ.

ಅಗತ್ಯವಿರುವವರು ಇಲ್ಲಿಗೆ ಬಂದು 1 ರೂಪಾಯಿ ನೀಡಿ ಊಟ ಮಾಡಬಹುದು’ ಎಂದು ಗಂಭೀರ್ ತಿಳಿಸಿದ್ದಾರೆ. ಮುಂದಿನ ಗಣರಾಜ್ಯೋತ್ಸವದ ದಿನ ದಿಲ್ಲಿಯ ಅಶೋಕನಗರದಲ್ಲಿ ಮತ್ತೊಂದು ಕ್ಯಾಂಟೀನ್‌ ಆರಂಭಿಸುವುದಾಗಿಯೂ ಗೌತಮ್ ಗಂಭೀರ್‌ ತಿಳಿಸಿದ್ದಾರೆ. ಜಾತಿ, ಮತ, ಧರ್ಮ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬರಿಗೂ ಆರೋಗ್ಯಕರ ಮತ್ತು ಶುಚಿತ್ವವಿರುವ ಆಹಾರ ಸಿಗಬೇಕು ಎಂದು ನಾನು ಭಾವಿಸುತ್ತೇನೆ.

ದಿಲ್ಲಿಯ ಪ್ರತಿಯೊಬ್ಬ ವ್ಯಕ್ತಿಗೆ ಆರೋಗ್ಯಕರ ಆಹಾರ ಮತ್ತು ಶುದ್ಧ ನೀರನ್ನು ಪಡೆಯುವ ನನ್ನ ಕನಸು ನನಸಾಗುವ ವರೆಗೆ ನಾನು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ. ಪೂರ್ವ ದಿಲ್ಲಿಯ ಗಾಂಧಿನಗರದಲ್ಲಿ ಈ ಕ್ಯಾಂಟೀನ್‌ ಇದ್ದು, ಸಂಪೂರ್ಣ ಅಭಿವೃದ್ಧಿ ಹೊಂದಿದ ಖಾಸಗಿ ಕ್ಯಾಂಟೀನ್ ಇದಾಗಿದೆ. ಇತರೆ ಹೋಟೆಲ್‌ಗಿಂತಲೂ ಕಮ್ಮಿ ಇಲ್ಲವೆಂಬಂತೆ ನಿರ್ಮಾಣಗೊಂಡಿದೆ. ಈ ಕ್ಯಾಂಟೀನ್‌ನ ಸಂಪೂರ್ಣ ವೆಚ್ಚವನ್ನು ಗೌತಮ್‌ ಗಂಭೀರ್‌ ನೋಡಿಕೊಳ್ಳುತ್ತಿದ್ದಾರೆ.

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

4 minutes ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

39 minutes ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 hour ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 hour ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 hour ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

2 hours ago