ಬೆಂಗಳೂರು: ಆನ್ಲೈನ್ ಮೂಲಕ ಮನೆ ಬಾಗಿಲಿಗೆ ತಾಜಾ ಮೀನು ಒದಗಿಸುವ ಯೋಜನೆಯಾದ ‘ಮತ್ಸ್ಯ ಸಂಪದ’ ಯೋಜನೆಗೆ ನ.21ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ನ.21ರಂದು ವಿಧಾನಸೌಧದಲ್ಲಿ ‘ಮತ್ಸ್ಯ ಸಂಪದ’ ಯೋಜನೆ, ಆ್ಯಪ್ ಮತ್ತು ಕಾರ್ಯಾಗಾರಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು. ಆರಂಭಿಕ ಹಂತದಲ್ಲಿ ಬೆಂಗಳೂರಿನಲ್ಲಿ ಮಾತ್ರ ಜಾರಿಗೊಳಿಸಲಾಗುತ್ತಿದ್ದು, ಕರಾವಳಿ ಪ್ರದೇಶ ಹೊರತುಪಡಿಸಿ ನಂತರ ರಾಜ್ಯಾದ್ಯಂತ ಜಾರಿಗೊಳಿಸುವ ಉದ್ದೇಶವಿದೆ.
ಕರಾವಳಿ ಜಿಲ್ಲೆಗಳ ಹಳ್ಳಿಗಳಲ್ಲಿ ಮಹಿಳೆಯರು ತಲೆ ಮೇಲೆ ಮೀನುಗಳನ್ನು ಹೊತ್ತು ಮಾರಾಟ ಮಾಡುತ್ತಿದ್ದಾರೆ. ಅಲ್ಲಿಯೂ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದರೆ, ಅವರಿಗೆ ತೊಂದರೆ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಕರಾವಳಿಯಲ್ಲಿ ಜಾರಿಗೊಳಿಸುತ್ತಿಲ್ಲ ಎಂದು ಹೇಳಿದರು.
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮುಂದಿನ ಐದು ವರ್ಷಗಳಿಗೆ ರಾಜ್ಯದಲ್ಲಿ ಸುಮಾರು 4115 ಕೋಟಿ ರು. ಕ್ರಿಯಾ ಯೋಜನೆ ಸಲ್ಲಿಸಲಾಗಿದೆ. ಈ ಯೋಜನೆಗಳ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಇನ್ನೂ 5 ಹೊಸ ಮೀನುಗಾರಿಕೆ ಕಾಲೇಜು : ಮಂಗಳೂರು ಮೀನುಗಾರಿಕೆ ಕಾಲೇಜನ್ನು ಮೀನುಗಾರಿಕೆ ವಿಶ್ವವಿದ್ಯಾಲಯವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾಪ ಸಲ್ಲಿಸಲಾಗಿದೆ. ಇದರ ಜತೆಗೆ ಅಂಕೋಲಾ, ಶಿವಮೊಗ್ಗ, ಉಡುಪಿ, ಕಾರವಾರ ಹಾಗೂ ಮೈಸೂರಿನಲ್ಲಿ ಐದು ಹೊಸ ಮೀನುಗಾರಿಕಾ ಕಾಲೇಜು ಆರಂಭಿಸಲಾಗುವುದು ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಒಳನಾಡು ಮೀನುಗಾರಿಕೆಯಲ್ಲಿ ರಾಜ್ಯವು ದೇಶದಲ್ಲಿ 9ನೇ ಸ್ಥಾನದಲ್ಲಿದೆ. ಸಮುದ್ರ ಕಿನಾರೆ ಮೀನುಗಾರಿಕೆಯಲ್ಲಿ 4ನೇ ಸ್ಥಾನದಲ್ಲಿದ್ದು, ಪ್ರಥಮ ಸ್ಥಾನ ಪಡೆಯುವುದು ನಮ್ಮ ಗುರಿಯಾಗಿದ್ದು, ಆತ್ಮ-ನಿರ್ಭರ ಯೋಜನೆಯಡಿ ಸುಮಾರು 10 ಸಾವಿರ ಯುವಕರಿಗೆ ಮೀನುಗಾರಿಕೆ ಇಲಾಖೆಯಿಂದ ರಾಜ್ಯದ ವಿವಿಧೆಡೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…