Featured

ಹೊಸ ಉಪಜಾತಿಗಳ ಸೃಷ್ಟಿ: ಸರ್ಕಾರದ ಜಾತಿ ಜನಗಣತಿ ರದ್ದುಪಡಿಸುವಂತೆ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ – vishwanews24

ಹೊಸ ಉಪಜಾತಿಗಳ ಸೃಷ್ಟಿ: ಸರ್ಕಾರದ ಜಾತಿ ಜನಗಣತಿ ರದ್ದುಪಡಿಸುವಂತೆ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು:  ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್​ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ.

ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರ, ಜಾತಿ ಮತ್ತು ಉಪಜಾತಿಗಳ ನಡುವೆ ಎತ್ತಿ ಕಟ್ಟುತ್ತಿದೆ. ಹೀಗಾಗಿ ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ.

15 ದಿನಗಳಲ್ಲಿ ಸರ್ಕಾರ ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿ ಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾಗ ಗಣತಿ ಸರಿಯಲ್ಲ, ಸರ್ಕಾರ 1500 ಉಪಜಾತಿಗಳಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿಗಣತಿ ಆರಂಭವಾಗುತ್ತಿದೆ. ಜಾತಿಗಣತಿ ನಡೆಸುವ ಬಗ್ಗೆ ಸರ್ಕಾರದ ಕೈಪಿಡಿ ಪಟ್ಟಿಯಲ್ಲಿರುವ ಕೆಲ ಜಾತಿಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಏಕೆಂದರೆ ಸರ್ಕಾರ ರಾಜ್ಯದಲ್ಲಿ ಗುರುತಿಸಿರುವ ಜಾತಿ ಮತ್ತು ಉಪಜಾತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಕೆಲ ಜಾತಿಗಳ ಮುಂದೆ ಕ್ರಿಶ್ಚಿಯನ್ ಅಂತಾ ನಮೂದಿಸಲಾಗಿದೆ.

ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಜಂಗಮ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ನೇಕಾರ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ಅಷ್ಟೇ ಯಾಕೆ ಒಕ್ಕಲಿಗ ಕ್ರಿಶ್ಚಿಯನ್, ವಿಶ್ವಕರ್ಮ ಬ್ರಾಹ್ಮಣ ಕ್ರಿಶ್ಚಿಯನ್ ಅಂತಾ ಉಲ್ಲೇಖವಿದೆ. ಈ ಪಟ್ಟಿಯೇ ಈಗ ಆಕ್ರೋಶಕ್ಕೆ ಕಾರಣವಾಗಿದೆ.

ಹಿಂದೂಗಳ ಜಾತಿಗಳ ನಡುವೆ ಕ್ರಿಶ್ಚಿಯನ್ ನುಗ್ಗಿಸುವ ಹುನ್ನಾರ’ ಹೆಸರಿನಡಿ, ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಹೋರಾಟಕ್ಕೆ ಕರೆ ನೀಡಿವೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಮುಂದಾಗಿವೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ನಾವು ಕಾಲಂ ಕೊಟ್ಟಿದ್ದೇವೆ. ಅವರು ಏನ್ ಬರಿತಾರೋ ಬರೆಯಲಿ ಎಂದಿದ್ದರು.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago