ಹೊಸದಿಲ್ಲಿ: ಮೂರು ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಸರಕಾರ ಮಾತುಕತೆಗೆ ಆಹ್ವಾನಿಸಿದರೆ ಮಾತುಕತೆಗೆ ಸಿದ್ದರಾಗಿದ್ದಾರೆ. ಜನವರಿ 22ರಂದು ಕೊನೆಗೊಂಡಿದ್ದ ಮಾತುಕತೆ ಪುನರಾರಂಭಿಸಲು ಸಿದ್ಧ. ಆದರೆ ನಮ್ಮ ಬೇಡಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ರವಿವಾರ ಹೇಳಿದ್ದಾರೆ.
ಮಾತುಕತೆ ಪುನರಾರಂಭಿಸಲು 2020ರ ನವೆಂಬರ್ ರಿಂದ ದಿಲ್ಲಿಯ ಮೂರು ಗಡಿಭಾಗಗಳಾದ ಸಿಂಘು, ಟಿಕ್ರಿ ಹಾಗೂ ಘಾಝಿಪುರ್ ನಲ್ಲಿ ಬೀಡುಬಿಟ್ಟಿರುವ ಪ್ರತಿಭಟನಕಾರರನ್ನು ಪ್ರತಿನಿದಿಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ)ವನ್ನು ಸರಕಾರವು ಮಾತುಕತೆಗೆ ಆಹ್ವಾನಿಸಬೇಕು ಎಂದು ಅವರು ಹೇಳಿದರು.
ಜನರು ತಾವೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್ -Vishwanews24
ಸರಕಾರದೊಂದಿಗಿನ ಮಾತುಕತೆ ಜನವರಿ 22ರಂದು ಕೊನೆಗೊಂಡ ಸ್ಥಳದಿಂದ ಆರಂಭವಾಗುತ್ತದೆ. ಎಲ್ಲಾ ಮೂರು ಕಪ್ಪು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು.ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ನೀಡಬೇಕೆಂಬ ಬೇಡಿಕೆಯಲ್ಲಿ ಬದಲಾವಣೆ ಇಲ್ಲ ಎಂದು ಟಿಕಾಯತ್ ಹೇಳಿಕೆಯನ್ನು ಉಲ್ಲೇಖಿಸಿ ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.
ಕೊರೋನ ವೈರಸ್ ಹೆಚ್ಚುತ್ತಿರುವ ಮಧ್ಯೆ ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸುವಂತೆ ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬಿಕೆಯು ರಾಷ್ಟ್ರೀಯ ವಕ್ತಾರರು ಈ ಹೇಳಿಕೆ ನೀಡಿದ್ದಾರೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…