ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ದಾಖಲೆ ಪ್ರಕಾರ ದೇಶದಲ್ಲಿ ವರ್ಷಕ್ಕೆ ಸುಮಾರು 5 ಲಕ್ಷ ಅಪಘಾತಗಳು ನಡೆಯುತ್ತಿವೆ. ಈ ರೀತಿಯ ರಸ್ತೆ ಅಪಘಾತದಲ್ಲಿ ಒಂದೂವರೆ ಲಕ್ಷ ಜನ ಸಾವನ್ನಪ್ಪಿದ್ದಾರೆ. ಕಾಯ್ದೆಯ ಆಯ್ದ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದೆ.
ಇನ್ನೂ ಕೆಲವು ನಿಯಮಗಳು ಡಿಸೆಂಬರ್ 1ರಿಂದ ಜಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೀಗಾಗಿ, ವಾಹನ ದಾಖಲೆ ಇಲ್ಲದಿದ್ದರೆ ಸರಿಮಾಡಿಸಿ. ಡ್ರೈವಿಂಗ್ ಲೈಸೆನ್ಸ್ ಮತ್ತು ಇನ್ಷುರೆನ್ಸ್ ಇಲ್ಲವಾದರೆ ಆದಷ್ಟು ಬೇಗ ಮಾಡಿಸಿಕೊಳ್ಳುವುದು ಉತ್ತಮ. ಮುಂದಿನ ತಿಂಗಳ 1ರಿಂದ ಟ್ರಾಫಿಕ್ ನಿಯಮಗಳನ್ನು ಬ್ರೇಕ್ ಮಾಡಿದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡಿದರೆ, ವಾಹನ ಚಾಲನೆ ವೇಳೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಮತ್ತು ಅಪಘಾತ ಮಾಡಿದರೆ ಅದಕ್ಕೆ ಆ ಮಕ್ಕಳ ಪೋಷಕರು ಅಥವಾ ಆ ವಾಹನದ ಮಾಲಿಕರೇ ಹೊಣೆಯಾಗುತ್ತಾರೆ. ಆ ವಾಹನದ ನೋಂದಣಿಯನ್ನು 1 ವರ್ಷದವರೆಗೆ ಅಮಾನತಿನಲ್ಲಿ ಇಡಲಾಗುತ್ತದೆ.
ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಡ್ರೈವಿಂಗ್ ಲೈಸೆನ್ಸ್ ಅನರ್ಹಗೊಳಿಸಲಾಗುತ್ತದೆ.
| ವಿವರ | ಹಳೆಯ ದಂಡ (ರೂ.) | ಹೊಸ ದಂಡ (ರೂ.) |
| ಲೈಸೆನ್ಸ್ ಇಲ್ಲದ ವಾಹನ ಚಾಲನೆ | 500 | 5,000 |
| ಲೈಸೆನ್ಸ್ ತಿರಸ್ಕೃತಗೊಂಡಿದ್ದರೂ ಚಾಲನೆ | 500 | 10,000 |
| ವೇಗದ ಚಾಲನೆ | 400 | 1,000 (ಲಘು ವಾಹನ) 2000 (ಮಧ್ಯಮ ಪ್ರಯಾಣಿಕರ ವಾಹನ) |
| ಮದ್ಯಸೇವಿಸಿ ಚಾಲನೆ | 2,000 | 10,000 |
| ಹೆಲ್ಮೆಟ್ ಧರಿಸದಿದ್ದರೆ | 100 | 1,000, 3 ತಿಂಗಳ ಲೈಸೆನ್ಸ್ ರದ್ದು |
| ಸೀಟ್ ಬೆಲ್ಟ್ ಹಾಕದಿರುವುದು | 100 | 1,000 |
| ನಿಗದಿಗಿಂತ ಹೆಚ್ಚು ಜನರನ್ನು ಕರೆದೊಯ್ಯುವುದು | – | 1,000 |
| ತುರ್ತುಸೇವೆ ವಾಹನಗಳಿಗೆ ದಾರಿ ಬಿಡದಿರುವುದು | – | 10,000 |
| ಇನ್ಷುರೆನ್ಸ್ ಇಲ್ಲದೆ ವಾಹನ ಚಾಲನೆ | 1,000 | 2,000 |
| ದ್ವಿಚಕ್ರ ವಾಹನದಲ್ಲಿ ಹೆಚ್ಚು ಜನರನ್ನು ಕರೆದೊಯ್ಯುವುದು | 100 | 2,000, 3 ತಿಂಗಳವರೆಗೆ ಲೈಸೆನ್ಸ್ ರದ್ದು |
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…