Featured

ಹೊಸ ಟ್ರಾಫಿಕ್ ರೂಲ್ಸ್ : ಸೆಪ್ಟೆಂಬರ್ 1ರಿಂದ ನಿಯಮಗಳು ಜಾರಿಗೆ -Vishwanews24

ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ದಾಖಲೆ ಪ್ರಕಾರ ದೇಶದಲ್ಲಿ ವರ್ಷಕ್ಕೆ ಸುಮಾರು 5 ಲಕ್ಷ ಅಪಘಾತಗಳು ನಡೆಯುತ್ತಿವೆ. ಈ ರೀತಿಯ ರಸ್ತೆ ಅಪಘಾತದಲ್ಲಿ ಒಂದೂವರೆ ಲಕ್ಷ ಜನ ಸಾವನ್ನಪ್ಪಿದ್ದಾರೆ. ಕಾಯ್ದೆಯ ಆಯ್ದ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದೆ.

ಇನ್ನೂ ಕೆಲವು ನಿಯಮಗಳು ಡಿಸೆಂಬರ್ 1ರಿಂದ ಜಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೀಗಾಗಿ, ವಾಹನ ದಾಖಲೆ ಇಲ್ಲದಿದ್ದರೆ ಸರಿಮಾಡಿಸಿ. ಡ್ರೈವಿಂಗ್ ಲೈಸೆನ್ಸ್​ ಮತ್ತು ಇನ್ಷುರೆನ್ಸ್​ ಇಲ್ಲವಾದರೆ ಆದಷ್ಟು ಬೇಗ ಮಾಡಿಸಿಕೊಳ್ಳುವುದು ಉತ್ತಮ. ಮುಂದಿನ ತಿಂಗಳ 1ರಿಂದ ಟ್ರಾಫಿಕ್ ನಿಯಮಗಳನ್ನು ಬ್ರೇಕ್ ಮಾಡಿದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ.

ಜಾಹಿರಾತು

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡಿದರೆ, ವಾಹನ ಚಾಲನೆ ವೇಳೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಮತ್ತು ಅಪಘಾತ ಮಾಡಿದರೆ ಅದಕ್ಕೆ ಆ ಮಕ್ಕಳ ಪೋಷಕರು ಅಥವಾ ಆ ವಾಹನದ ಮಾಲಿಕರೇ ಹೊಣೆಯಾಗುತ್ತಾರೆ. ಆ ವಾಹನದ ನೋಂದಣಿಯನ್ನು 1 ವರ್ಷದವರೆಗೆ ಅಮಾನತಿನಲ್ಲಿ ಇಡಲಾಗುತ್ತದೆ.

ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಡ್ರೈವಿಂಗ್ ಲೈಸೆನ್ಸ್ ಅನರ್ಹಗೊಳಿಸಲಾಗುತ್ತದೆ.

ವಿವರ ಹಳೆಯ ದಂಡ (ರೂ.) ಹೊಸ ದಂಡ (ರೂ.)
ಲೈಸೆನ್ಸ್ ಇಲ್ಲದ ವಾಹನ ಚಾಲನೆ 500 5,000
ಲೈಸೆನ್ಸ್​ ತಿರಸ್ಕೃತಗೊಂಡಿದ್ದರೂ ಚಾಲನೆ 500 10,000
ವೇಗದ ಚಾಲನೆ 400 1,000 (ಲಘು ವಾಹನ)

2000 (ಮಧ್ಯಮ ಪ್ರಯಾಣಿಕರ ವಾಹನ)

ಮದ್ಯಸೇವಿಸಿ ಚಾಲನೆ 2,000 10,000
ಹೆಲ್ಮೆಟ್​ ಧರಿಸದಿದ್ದರೆ 100 1,000, 3 ತಿಂಗಳ ಲೈಸೆನ್ಸ್​ ರದ್ದು
ಸೀಟ್ ಬೆಲ್ಟ್​ ಹಾಕದಿರುವುದು 100 1,000
ನಿಗದಿಗಿಂತ ಹೆಚ್ಚು ಜನರನ್ನು ಕರೆದೊಯ್ಯುವುದು 1,000
ತುರ್ತುಸೇವೆ ವಾಹನಗಳಿಗೆ ದಾರಿ ಬಿಡದಿರುವುದು 10,000
ಇನ್ಷುರೆನ್ಸ್​ ಇಲ್ಲದೆ ವಾಹನ ಚಾಲನೆ 1,000 2,000
ದ್ವಿಚಕ್ರ ವಾಹನದಲ್ಲಿ ಹೆಚ್ಚು ಜನರನ್ನು ಕರೆದೊಯ್ಯುವುದು 100 2,000, 3 ತಿಂಗಳವರೆಗೆ ಲೈಸೆನ್ಸ್​ ರದ್ದು
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago