Featured

ಹೊಸ ಭೂಸುಧಾರಣೆ ಕಾಯ್ದೆ : ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲವಿಲ್ಲ : ಹೆಚ್. ಡಿ.ಕುಮಾರಸ್ವಾಮಿ -Vishwanews24

ಹೊಸ ಭೂಸುಧಾರಣೆ ಕಾಯ್ದೆ : ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲವಿಲ್ಲ : ಹೆಚ್. ಡಿ.ಕುಮಾರಸ್ವಾಮಿ -Vishwanews24

ಹೊಸ ಭೂ ಸುಧಾರಣಾ ಕಾಯ್ದೆಯಲ್ಲಿ ಮಾರಕವಾದ ಅಂಶಗಳು ಯಾವುದು ಯಾಕಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ?? ಪ್ರತಿಭಟನಾಕಾರರಿಗೆ HDK ಪ್ರಶ್ನೆ

ಬೆಂಗಳೂರು : ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಸುಧಾರಣೆ ಕಾಯ್ದೆ ರೈತರಿಗೆ ಮಾರಕವಾಗುವಮತೆ ಅಂಶವಿಲ್ಲ, ಈಗ ಇದರಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ಈ ಕಾಯ್ದೆಯಿಂದ ದೊಡ್ಡ ಮಟ್ಟದ ಅಪಾಯವಿಲ್ಲ ಎಂದು ಹೇಳಿದ್ದಾರೆ.

ಭೂಸುಧಾರಣೆ ಕಾಯ್ದೆಗೆ ನಾನು, ಹೆಚ್.ಡಿ. ದೇವೇಗೌಡರು ಮೊದಲು ವಿರೋಧಿಸಿದ್ದೆವು.ಇದೀಗ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ರೈತರಿಗೆ ಭೂಸುಧಾರಣೆ ಕಾಯ್ದೆ ಬಗ್ಗೆ ಮಾಹಿತಿಯ ಕೊರತೆ ಇದೆ. ರೈತರ ಹೋರಾಟದಿಂದ ಸಮಾಜಕ್ಕೆ ಹಾನಿಯಾಗಬಾರದು ಎಂದು ಹೇಳಿದ್ದಾರೆ.

ಹೊಸ ಭೂ ಸುಧಾರಣಾ ಕಾಯ್ದೆಯಲ್ಲಿ ಮಾರಕವಾದ ಅಂಶಗಳು ಯಾವುದು ಯಾಕಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರತಿಭಟನಾನಿರತರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಿಜವಾಗಿಯೂ ಭೂ ಸುಧಾರಣೆಯಲ್ಲಿ ಯಾವೆಲ್ಲಾ ಬದಲಾವಣೆ ತರಲಾಗಿದೆ ಎಂಬುದನ್ನು ಪ್ರತಿಭಟನಾಕಾರರಿಗೆ ಅವಲೋಕಿಸುವಷ್ಟು ತಾಳ್ಮೆ ಇಲ್ಲ ಮೊದಲಿದ್ದ ಕಾಯ್ದೆಗೂ ಈಗಿರುವ ಕಾಯ್ದೆಗೂ ಬಹಳಷ್ಟು ಬದಲಾವಣೆ ತರಲಾಗಿದೆ ಹಾಗಾಗಿ ಪ್ರತಿಭಟನಾಕಾರರು ಮೊದಲು ಬದಲಾವಣೆಗೊಳಿಸಿದ ಭೂ ಸುಧಾರಣಾ ಕಾಯ್ದೆಯನ್ನು ಪರಿಶೀಲಿಸಿ ಬಳಿಕ ಪ್ರತಿಭಟನೆ ನಡೆಸಲಿ ಎಂದು ಹೇಳಿದ್ದಾರೆ.

ರೈತರ ಕಾಯಿದೆ ಬಗ್ಗೆ ಬಿಜೆಪಿಯ ಪರವಾಗಿ ಜೆಡಿಎಸ್ ಒಲವು ತೋರಿಸುತ್ತಿದೆ ಎಂಬ ಕಾಂಗ್ರೆಸ್ ಹಾಗೂ ರೈತ ಮುಖಂಡರ ಹೇಳಿಕೆಗೆ ಸಮರ್ಥನೆಯನ್ನು ನೀಡಿದ ಹೆಚ್ ಡಿಕೆ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ.

ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ಹೇಳಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

13 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

15 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

15 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

16 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

16 hours ago