Featured

ಹೊಸ ಮೋಟಾರು ವಾಹನ ಕಾಯ್ದೆ : ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶ : ನಿತಿನ್ ಗಡ್ಕರಿ -Vishwanews24

ನವದೆಹಲಿ: ಜನರ ಮೇಲೆ ದುಬಾರಿ ದಂಡ ವಿಧಿಸುವುದು ಸರ್ಕಾರದ ಉದ್ದೇಶವಲ್ಲಾ, ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶವಾಗಿದೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ  ಎಂದಿದ್ದಾರೆ.

ಭಾನುವಾರದಿಂದ ನೂತನ ಸಂಚಾರಿ ನಿಯಮ ಜಾರಿಗೆ ಬಂದ ನಂತರ ಸಂಚಾರಿ ನಿಯಮ ಉಲ್ಲಂಘನೆಗಾಗಿ ಗುರುಗ್ರಾಮ್ ನಲ್ಲಿ ಬೈಕ್ ಸವಾರನೊಬ್ಬನಿಗೆ 23 ಸಾವಿರ ದಂಡ ವಿಧಿಸಲಾಗಿದೆ. ಟ್ರಕ್ ಡ್ರೈವರ್ ಗೆ 59 ಸಾವಿರದ ಚಲನ್ ನೀಡಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ನಿತಿನ್ ಗಡ್ಕರಿ, ಸರ್ಕಾರ ಸುಖಾಸುಮ್ಮನೆ ಜನರ ಮೇಲೆ ದಂಡ ಹಾಕುವುದಿಲ್ಲ. ಯಾರೊಬ್ಬರು ಅಂತಹ ದಂಡ ಪಾವತಿಸದಂತಹ ದಿನ ಬರಬೇಕಾಗಿದೆ ಎಂದರು.

ಕುಡಿದು ವಾಹನ ಚಾಲನೆ ಮಾಡುವ ಆಟೋ ಡ್ರೈವರ್ ಉಲ್ಲೇಖಿಸಿ ಮಾತನಾಡಿದ ನಿತಿನ್ ಗಡ್ಕರಿ, ಅಪಘಾತ ಸಂಭವಿಸಿದರೆ ಯಾರು ಜವಾಬ್ದಾರಿ ಹೊರುತ್ತಾರೆ ಎಂದು ಪ್ರಶ್ನಿಸಿದರು.

ನೂತನ ಕಾಯ್ದೆ ಅನುಷ್ಠಾನಕ್ಕೆ ಪಶ್ಚಿಮ ಬಂಗಾಳ ಹಾಗೂ ಮಧ್ಯಪ್ರದೇಶ ರಾಜ್ಯಗಳು ನಿರಾಕರಿಸಿವೆ. ಈ ವಿಚಾರ ಸಮವರ್ತಿ ಪಟ್ಟಿಯಲ್ಲಿ ಬರಲಿದ್ದು, ಏಳು ರಾಜಕೀಯ ಪಕ್ಷಗಳ ರಾಜ್ಯ ಸಾರಿಗೆ ಸಚಿವರನ್ನೊಳಗೊಂಡ ಸಮಿತಿಯ ಶಿಫಾರಸ್ಸಿನ ನಂತರ ನೂತನ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಸಂಸತ್ತಿನ ಸ್ಥಾಯಿ ಸಮಿತಿಯೂ ಕೂಡಾ ಸಲಹೆಗಳನ್ನು ನೀಡಿದ್ದು, ನಂತರವಷ್ಟೇ ನೂತನ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

ದೇಶದಲ್ಲಿ  ಪ್ರತಿವರ್ಷ  5 ಲಕ್ಷ ಅಪಘಾತಗಳು ಸಂಭವಿಸುತ್ತಿದ್ದು, 1.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಇವರ ಜೀವವನ್ನು ಕಾಪಾಡಲಿಲ್ಲವೆಂದರೆ ದೇಶದ ಕಾನೂನಿಗೆ ಗೌರವ ಕೊಟ್ಟಂತೆ ಆಗುವುದಿಲ್ಲ ಅಂತೆಯೇ ಭಯ ಕೂಡಾ ಇರುವುದಿಲ್ಲ ಇದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗಾಗಿ ಕಠಿಣ ದಂಡವನ್ನು ವಿಧಿಸುವುದು ಅಗತ್ಯವಾಗಿದೆ ಎಂದು ಅವರು ಸಮರ್ಥಿಸಿಕೊಂಡರು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago