Featured

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಶಾಕ್ : ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ – vishwanews24

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಶಾಕ್ : ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು: ಹೊಸ ವರ್ಷದ  ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ.

ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ ದರವನ್ನು 20% ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡುವ ಮೂಲಕ ಕಿಕ್ ಇಳಿಸಿವೆ.

ಎಷ್ಟು ದುಬಾರಿ?

ಜನವರಿ 1ರಿಂದ ಮದ್ಯ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಹಾಲಿ ಓಟಿ 180 ಎಂಎಲ್‌ಗೆ 100 ರೂಪಾಯಿ ಇದ್ದು, ಜ.1 ರಿಂದ ಓಟಿ ಬೆಲೆ 123 ರೂ.ಗೆ ಏರಿಕೆಯಾಗಲಿದೆ. ಬಿಪಿ ದರ ಹಾಲಿ 123 ರೂ. ಇದ್ದು ಜನವರಿಯಿಂದ 159 ರೂ. ಆಗಲಿದೆ. 8ಪಿಎಂ ದರ ಹಾಲಿ 100 ರೂ. ಇದ್ದು 123 ರೂ.ಗೆ ಏರಲಿದೆ.

ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಜನವರಿ 1ರಿಂದ ದರ ಏರಿಕೆ ಮಾಡುವಂತೆ ಬಾರ್  ಮಾಲೀಕರಿಗೆ ಕಂಪನಿಗಳಿಂದ ಸೂಚನೆ ನೀಡಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಈ ಕಾರಣ ಗ್ರಾಹಕರ ಮೇಲೆ ಹೊರೆ ಹಾಕಲೇಬೇಕಾದ ಹಿನ್ನೆಲೆ ದರ ಏರಿಕೆಗೆ ಕಂಪನಿಗಳು ನಿರ್ಧಾರ ಮಾಡಿವೆ.

ಈ ಸಂಬಂಧ ಬಾರ್ ಮಾಲೀಕರಿಗೆ ಅಂದರೆ ಎಂಆರ್‌ಪಿ ಬಾರ್ ಮಾಲೀಕರಿಗೆ ಮೆಸೇಜ್ ಮೂಲಕ ಕಂಪನಿಗಳು ಮಾಹಿತಿ ರವಾನೆ ಮಾಡಿದ್ದು, ಸೂಚನೆಯಂತೆ ದರ ನಿಗದಿಯಂತೆ ಸಹಕರಿಸುವಂತೆ ಮನವಿ ಮಾಡಿವೆ.

ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35,000 ಕೋಟಿ ರೂ. ಗುರಿ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

23 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago