Featured

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಶಾಕ್ : ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ – vishwanews24

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಶಾಕ್ : ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು: ಹೊಸ ವರ್ಷದ  ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ.

ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ ದರವನ್ನು 20% ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡುವ ಮೂಲಕ ಕಿಕ್ ಇಳಿಸಿವೆ.

ಎಷ್ಟು ದುಬಾರಿ?

ಜನವರಿ 1ರಿಂದ ಮದ್ಯ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಹಾಲಿ ಓಟಿ 180 ಎಂಎಲ್‌ಗೆ 100 ರೂಪಾಯಿ ಇದ್ದು, ಜ.1 ರಿಂದ ಓಟಿ ಬೆಲೆ 123 ರೂ.ಗೆ ಏರಿಕೆಯಾಗಲಿದೆ. ಬಿಪಿ ದರ ಹಾಲಿ 123 ರೂ. ಇದ್ದು ಜನವರಿಯಿಂದ 159 ರೂ. ಆಗಲಿದೆ. 8ಪಿಎಂ ದರ ಹಾಲಿ 100 ರೂ. ಇದ್ದು 123 ರೂ.ಗೆ ಏರಲಿದೆ.

ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಜನವರಿ 1ರಿಂದ ದರ ಏರಿಕೆ ಮಾಡುವಂತೆ ಬಾರ್  ಮಾಲೀಕರಿಗೆ ಕಂಪನಿಗಳಿಂದ ಸೂಚನೆ ನೀಡಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಈ ಕಾರಣ ಗ್ರಾಹಕರ ಮೇಲೆ ಹೊರೆ ಹಾಕಲೇಬೇಕಾದ ಹಿನ್ನೆಲೆ ದರ ಏರಿಕೆಗೆ ಕಂಪನಿಗಳು ನಿರ್ಧಾರ ಮಾಡಿವೆ.

ಈ ಸಂಬಂಧ ಬಾರ್ ಮಾಲೀಕರಿಗೆ ಅಂದರೆ ಎಂಆರ್‌ಪಿ ಬಾರ್ ಮಾಲೀಕರಿಗೆ ಮೆಸೇಜ್ ಮೂಲಕ ಕಂಪನಿಗಳು ಮಾಹಿತಿ ರವಾನೆ ಮಾಡಿದ್ದು, ಸೂಚನೆಯಂತೆ ದರ ನಿಗದಿಯಂತೆ ಸಹಕರಿಸುವಂತೆ ಮನವಿ ಮಾಡಿವೆ.

ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35,000 ಕೋಟಿ ರೂ. ಗುರಿ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

5 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

5 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

6 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

9 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

9 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

9 hours ago