Featured

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ – vishwanews24

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ (XPoSat Launch) ಯಶಸ್ವಿಯಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.

ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ.

POLIX (ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು XSPECT (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಪೇಲೋಡ್‌ಗಳಾಗಿವೆ. POLIX ಅನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‌ಸ್ಪೆಕ್ಟ್ ಅನ್ನು ಬೆಂಗಳೂರಿನ ಯುಆರ್‌ಎಸ್‌ಸಿಯ ಬಾಹ್ಯಾಕಾಶ ಖಗೋಳವಿಜ್ಞಾನಿಗಳ ತಂಡ ಅಭಿವೃದ್ಧಿಪಡಿಸಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago