Featured

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ – vishwanews24

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ (XPoSat Launch) ಯಶಸ್ವಿಯಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.

ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ.

POLIX (ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು XSPECT (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಪೇಲೋಡ್‌ಗಳಾಗಿವೆ. POLIX ಅನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‌ಸ್ಪೆಕ್ಟ್ ಅನ್ನು ಬೆಂಗಳೂರಿನ ಯುಆರ್‌ಎಸ್‌ಸಿಯ ಬಾಹ್ಯಾಕಾಶ ಖಗೋಳವಿಜ್ಞಾನಿಗಳ ತಂಡ ಅಭಿವೃದ್ಧಿಪಡಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago