ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್-19 ನಿಯಮ ಪಾಲಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸ ವರ್ಷಕ್ಕೆ ಇನ್ನೇನು ಕೌಂಟ್ಡೌನ್ ಸ್ಟಾರ್ಟ್ ಆಗಿದೆ. ಈ ನಡುವೆ ಜನ ಹೊಸ ವರ್ಷಾಚರಣೆಗೆ ಗುಂಪುಗೂಡಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಸರ್ಕಾರ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಘೋಷಿಸಿದೆ.
ಕೊರೊನಾ ಎರಡನೇ ಅಲೆಯಿಂದ ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ರಾಜ್ಯದ ಜನತೆಗೆ ಇದೀಗ ಮತ್ತೊಮ್ಮೆ ನೈಟ್ ಕರ್ಫ್ಯೂ ವಿಧಿಸಿರುವುದು ಭಾರೀ ಆತಂಕ ಸೃಷ್ಟಿಸಿದೆ. ಹಲವಾರು ಮಂದಿ ಈ ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯ ಈ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ನಮಗೂ ಆರ್ಥಿಕ ಚಟುವಟಿಕೆಗಳು ನಡೆಯಲಿ ಎಂಬ ಯೋಚನೆ ಇದೆ. ಕೋವಿಡ್ ಕಾರಣದಿಂದಾಗಿ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದೇವೆ ಎಂದು ಹೇಳಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆಗೆ ಜನರು ಪ್ರವಾಸಿ ತಾಣ, ರೆಸಾರ್ಟ್ಗಳಿಗೆ ಮುಗಿಬೀಳುತ್ತಿರುವ ಬಗ್ಗೆ ಮಾತನಾಡಿದ ಅವರು, ಸಂಭ್ರಮಾಚರಣೆಗೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್ ನಿಯಮಗಳನ್ನು ಅನುಸರಿಸಲಿ. ಅವರಿಗೆ ಎಲ್ಲಿಗೆ ಬೇಕಾದರೂ ಹೋಗಲು ಸ್ವಾತಂತ್ರ್ಯ ಇದೆ. ನಿಯಮ ಪಾಲಿಸಿ ಸಂಭ್ರಮಾಚರಿಸಿಲಿ ಎಂದು ತಿಳಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…