Featured

ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ, ಆದರೆ ಕೋವಿಡ್-19 ನಿಯಮ ಪಾಲಿಸಲಿ : ಮುಖ್ಯಮಂತ್ರಿ – VIshwanewss24

ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ, ಆದರೆ ಕೋವಿಡ್-19 ನಿಯಮ ಪಾಲಿಸಲಿ : ಮುಖ್ಯಮಂತ್ರಿ – VIshwanewss24

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್-19 ನಿಯಮ ಪಾಲಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸ ವರ್ಷಕ್ಕೆ ಇನ್ನೇನು ಕೌಂಟ್‌ಡೌನ್ ಸ್ಟಾರ್ಟ್ ಆಗಿದೆ. ಈ ನಡುವೆ ಜನ ಹೊಸ ವರ್ಷಾಚರಣೆಗೆ ಗುಂಪುಗೂಡಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಸರ್ಕಾರ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಘೋಷಿಸಿದೆ.

ಕೊರೊನಾ ಎರಡನೇ ಅಲೆಯಿಂದ ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ರಾಜ್ಯದ ಜನತೆಗೆ ಇದೀಗ ಮತ್ತೊಮ್ಮೆ ನೈಟ್ ಕರ್ಫ್ಯೂ ವಿಧಿಸಿರುವುದು ಭಾರೀ ಆತಂಕ ಸೃಷ್ಟಿಸಿದೆ. ಹಲವಾರು ಮಂದಿ ಈ ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ನಮಗೂ ಆರ್ಥಿಕ ಚಟುವಟಿಕೆಗಳು ನಡೆಯಲಿ ಎಂಬ ಯೋಚನೆ ಇದೆ. ಕೋವಿಡ್ ಕಾರಣದಿಂದಾಗಿ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಜನರು ಪ್ರವಾಸಿ ತಾಣ, ರೆಸಾರ್ಟ್‍ಗಳಿಗೆ ಮುಗಿಬೀಳುತ್ತಿರುವ ಬಗ್ಗೆ ಮಾತನಾಡಿದ ಅವರು, ಸಂಭ್ರಮಾಚರಣೆಗೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್ ನಿಯಮಗಳನ್ನು ಅನುಸರಿಸಲಿ. ಅವರಿಗೆ ಎಲ್ಲಿಗೆ ಬೇಕಾದರೂ ಹೋಗಲು ಸ್ವಾತಂತ್ರ್ಯ ಇದೆ. ನಿಯಮ ಪಾಲಿಸಿ ಸಂಭ್ರಮಾಚರಿಸಿಲಿ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

8 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

8 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

8 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

8 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

11 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

12 hours ago