ಬೆಂಗಳೂರು: ನಗರದಲ್ಲಿ ಬೀದಿಗಿಳಿದು ಹೊಸ ವರ್ಷದ ಸಂಭ್ರಮಾಚರಣೆ ನಡೆಸಲು ಅವಕಾಶ ಇರುವುದಿಲ್ಲ ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಿಗ್ಗೆ 6 ವರೆಗೆ ಸಿ.ಆರ್.ಪಿ.ಸಿ ಸೆಕ್ಷನ್ 144 ಜಾರಿ ಮಾಡಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂತ್ ಹೇಳಿದ್ದಾರೆ.
ಪ್ರಮುಖ ರಸ್ತೆಗಳಲ್ಲಿ ಜನರು ಗುಂಪು ಸೇರುವುದನ್ನು ತಪ್ಪಿಸಲು ನೋ-ಮ್ಯಾನ್ ಝೋನ್ ರೂಪಿಸಲಾಗುತ್ತಿದೆ. ಎಂ.ಜಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಕೋರಮಂಗಲ ಹಾಗೂ ಇಂದಿರಾನಗರದಲ್ಲಿ ಜನರು ನಿಲ್ಲದಂತೆ ತಡೆಯಲು ವ್ಯವಸ್ಥೆ ರೂಪಿಸಲಾಗುತ್ತಿದೆ. ಮುಂಚಿತವಾಗಿ ಪಬ್, ಬಾರ್ ಗಳು ರೆಸ್ಟೋರೆಂಟ್ ಗಳಿಂದ ಪಡೆದಿರುವ ಕಾಯ್ದಿರಿಸಿರುವ ಕೂಪನ್ ಗಳಿದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.
ಹೊಸ ವರ್ಷಾಚಾರಣೆ ಸಂದರ್ಭದಲ್ಲಿ ಸೇರುವ ಜನಜಂಗುಳಿಯಿಂದಾಗಿ ಕೊರೋನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೆ ಕ್ರಮ ವಹಿಸಲಾಗಿದೆ
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…