Featured

ಹೊಸ ವರ್ಷಾಚರಣೆ – ರಾತ್ರಿ 10 ಗಂಟೆಯಿಂದ ಧ್ವನಿ ವರ್ಧಕ ಬಳಸಲು ಅವಕಾಶ ಇರುವುದಿಲ್ಲ : ಉಡುಪಿ ಜಿಲ್ಲಾ ಪೊಲೀಸ್ – vishwanews24

ಉಡುಪಿ: ಹೊಸ ವರ್ಷಾಚರಣೆ – ಕಾರ್ಯಕ್ರಮ ಆಯೋಜಕರಿಗೆ ಮಧ್ಯರಾತ್ರಿ 12.30 ರವರೆಗೆ ಮಾತ್ರ ಅವಕಾಶ

ರಾತ್ರಿ 10 ಗಂಟೆಯಿಂದ ಧ್ವನಿ ವರ್ಧಕ ಬಳಸಲು ಅವಕಾಶ ಇರುವುದಿಲ್ಲ

ಜಿಲ್ಲೆಯಾದ್ಯಂತ ಅನೈತಿಕ ಪೊಲೀಸ್‌ಗಿರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ

ಉಡುಪಿ: ಈ ಬಾರಿಯ ಹೊಸ ವರ್ಷ ಆಚರಿಸಲು ಕಾರ್ಯಕ್ರಮ ಆಯೋಜಕರಿಗೆ ಮಧ್ಯರಾತ್ರಿ 12.30 ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 10 ಗಂಟೆಯಿಂದ ಧ್ವನಿ ವರ್ಧಕ ಬಳಸಲು ಅವಕಾಶ ಇರುವುದಿಲ್ಲ. ಬಳಿಕ ಧ್ವನಿವರ್ಧಕ ಇಲ್ಲದೆ ಅಥವಾ ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಡಿ.31ರ ರಾತ್ರಿ ವೇಳೆ ಉಡುಪಿ ಜಿಲ್ಲೆಯ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚು ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಬೀಚ್‌ನಲ್ಲಿ ಪ್ರವಾಸಿಗರಿಗೆ ಯಾವುದೇ ತೊಂದರೆ, ಕಳ್ಳತನ, ಅಸಭ್ಯ ವರ್ತನೆ ಗಳು ಕಂಡುಬಂದರೆ ತಕ್ಷಣ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಇದಕ್ಕೆ ತಕ್ಷಣವೇ ಸ್ಪಂದಿಸಿ ಕ್ರಮ ತೆಗೆದುಕೊಳ್ಳಲು ಆಗುತ್ತದೆ ಎಂದು ಅವರು ಹೇಳಿದರು.

ಜಿಲ್ಲೆಯಾದ್ಯಂತ ಅನೈತಿಕ ಪೊಲೀಸ್‌ಗಿರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ವಿಶೇಷ ತಂಡವನ್ನು ರಚಿಸಲಾಗದೆ. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಇದ್ದರೆ ತಾವೇ ನೇರವಾಗಿ ಹೋಗಿ ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಬಳಿಕ ಅದನ್ನು ಪರಿಶೀಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಹೊಸ ವರ್ಷ ಆಚರಣೆಯ ಕಾರ್ಯಕ್ರಮಗಳಲ್ಲಿ ಡ್ರಗ್ಸ್ ಬಳಕೆ ಹಾಗೂ ರೇವು ಪಾರ್ಟಿ ನಡೆಯದಂತೆ ಪಾರ್ಟಿ ಮಾಡುವ ಅಪಾರ್ಟ್‌ಮೆಂಟ್, ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳನ್ನು ಪರಿಶೀಲನೆ ನಡೆಸಲು ವಿಶೇಷ ತಂಡವನ್ನು ರಚನೆ ಮಾಡಲಾಗುವುದು. ಆ ದಿನ ರಾತ್ರಿ ಯಾವುದೇ ರೀತಿಯಲ್ಲೂ ಟ್ರಾಫಿಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಟ್ರಾಫಿಕ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದು ಎಸ್ಪಿ ತಿಳಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago