Featured

ಹೊಸ ವರ್ಷಾಚರಣೆ – ರಾತ್ರಿ 10 ಗಂಟೆಯಿಂದ ಧ್ವನಿ ವರ್ಧಕ ಬಳಸಲು ಅವಕಾಶ ಇರುವುದಿಲ್ಲ : ಉಡುಪಿ ಜಿಲ್ಲಾ ಪೊಲೀಸ್ – vishwanews24

ಉಡುಪಿ: ಹೊಸ ವರ್ಷಾಚರಣೆ – ಕಾರ್ಯಕ್ರಮ ಆಯೋಜಕರಿಗೆ ಮಧ್ಯರಾತ್ರಿ 12.30 ರವರೆಗೆ ಮಾತ್ರ ಅವಕಾಶ

ರಾತ್ರಿ 10 ಗಂಟೆಯಿಂದ ಧ್ವನಿ ವರ್ಧಕ ಬಳಸಲು ಅವಕಾಶ ಇರುವುದಿಲ್ಲ

ಜಿಲ್ಲೆಯಾದ್ಯಂತ ಅನೈತಿಕ ಪೊಲೀಸ್‌ಗಿರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ

ಉಡುಪಿ: ಈ ಬಾರಿಯ ಹೊಸ ವರ್ಷ ಆಚರಿಸಲು ಕಾರ್ಯಕ್ರಮ ಆಯೋಜಕರಿಗೆ ಮಧ್ಯರಾತ್ರಿ 12.30 ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 10 ಗಂಟೆಯಿಂದ ಧ್ವನಿ ವರ್ಧಕ ಬಳಸಲು ಅವಕಾಶ ಇರುವುದಿಲ್ಲ. ಬಳಿಕ ಧ್ವನಿವರ್ಧಕ ಇಲ್ಲದೆ ಅಥವಾ ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಡಿ.31ರ ರಾತ್ರಿ ವೇಳೆ ಉಡುಪಿ ಜಿಲ್ಲೆಯ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚು ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಬೀಚ್‌ನಲ್ಲಿ ಪ್ರವಾಸಿಗರಿಗೆ ಯಾವುದೇ ತೊಂದರೆ, ಕಳ್ಳತನ, ಅಸಭ್ಯ ವರ್ತನೆ ಗಳು ಕಂಡುಬಂದರೆ ತಕ್ಷಣ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಇದಕ್ಕೆ ತಕ್ಷಣವೇ ಸ್ಪಂದಿಸಿ ಕ್ರಮ ತೆಗೆದುಕೊಳ್ಳಲು ಆಗುತ್ತದೆ ಎಂದು ಅವರು ಹೇಳಿದರು.

ಜಿಲ್ಲೆಯಾದ್ಯಂತ ಅನೈತಿಕ ಪೊಲೀಸ್‌ಗಿರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ವಿಶೇಷ ತಂಡವನ್ನು ರಚಿಸಲಾಗದೆ. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಇದ್ದರೆ ತಾವೇ ನೇರವಾಗಿ ಹೋಗಿ ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಬಳಿಕ ಅದನ್ನು ಪರಿಶೀಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಹೊಸ ವರ್ಷ ಆಚರಣೆಯ ಕಾರ್ಯಕ್ರಮಗಳಲ್ಲಿ ಡ್ರಗ್ಸ್ ಬಳಕೆ ಹಾಗೂ ರೇವು ಪಾರ್ಟಿ ನಡೆಯದಂತೆ ಪಾರ್ಟಿ ಮಾಡುವ ಅಪಾರ್ಟ್‌ಮೆಂಟ್, ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳನ್ನು ಪರಿಶೀಲನೆ ನಡೆಸಲು ವಿಶೇಷ ತಂಡವನ್ನು ರಚನೆ ಮಾಡಲಾಗುವುದು. ಆ ದಿನ ರಾತ್ರಿ ಯಾವುದೇ ರೀತಿಯಲ್ಲೂ ಟ್ರಾಫಿಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಟ್ರಾಫಿಕ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದು ಎಸ್ಪಿ ತಿಳಿಸಿದರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago