Featured

ಹೊಸ ವರ್ಷ ಆಚರಣೆ ​: ನಂದಿ ಬೆಟ್ಟದಲ್ಲಿ ಡಿ. 30ರ ಸಂಜೆಯಿಂದ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ – Vishwanews24

ಹೊಸ ವರ್ಷ ಆಚರಣೆ ​: ನಂದಿ ಬೆಟ್ಟದಲ್ಲಿ ಡಿ. 30ರ ಸಂಜೆಯಿಂದ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ – Vishwanews24

ಚಿಕ್ಕಬಳ್ಳಾಪುರ:  ಹೊಸ ವರ್ಷದ ಮೊದಲ ದಿನದಂದು ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಮೋಜು, ಮಸ್ತಿಯಲ್ಲಿ ತೊಡಗಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಳಗಿ ತೇಲುತ್ತಿದ್ದ ಪ್ರವಾಸಿಗರಿಗೆ, ಯುವ ಪ್ರೇಮಿಗಳಿಗೆ ಜಿಲ್ಲಾಡಳಿತ ಬಿಗ್‌ ಶಾಕ್‌ ಕೊಟ್ಟಿದೆ.

ಸಾಮಾನ್ಯವಾಗಿ ಜಿಲ್ಲಾಡಳಿತ ವರ್ಷದ ಕೊನೆಯ ದಿನ ಅಂದರೆ 30 ಅಥವಾ 31ರ ಸಂಜೆ 3 ರಿಂದ ಹೊಸ ವರ್ಷದ ಮೊದಲ ಜನ ಅಂದರೆ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ಮಾತ್ರ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದ ಜಿಲ್ಲಾಡಳಿತ ಇದೀಗ ಕೊರೋನಾ ಮೂರನೇ ಅಲೆಯ ಒಮಿಕ್ರೋನ್‌ಆತಂಕದ ಹಿನ್ನಲೆಯಲ್ಲಿ ಜನವರಿ 1ರಂದು ಕೂಡ ಸಂಪೂರ್ಣ ಗಿರಿಧಾಮವನ್ನು ಬಂದ್‌ಗೊಳಿಸಲು ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

2022ರ ಜನವರಿ 1 ರ ಹೊಸ ವರ್ಷದ ದಿನಾಚರಣೆಯ ಸಂಬಂಧವಾಗಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19 ರೂಪಾಂತರಿ ಓಮಿಕ್ರಾನ್‌ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಡಿ. 30ರ ಸಂಜೆ 6 ಗಂಟೆಯಿಂದ 2022ರ ಜನವರಿ 2 ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೊರಡಿಸಿರುವ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago