ಚಿಕ್ಕಬಳ್ಳಾಪುರ: ಹೊಸ ವರ್ಷದ ಮೊದಲ ದಿನದಂದು ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಮೋಜು, ಮಸ್ತಿಯಲ್ಲಿ ತೊಡಗಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಳಗಿ ತೇಲುತ್ತಿದ್ದ ಪ್ರವಾಸಿಗರಿಗೆ, ಯುವ ಪ್ರೇಮಿಗಳಿಗೆ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದೆ.
ಸಾಮಾನ್ಯವಾಗಿ ಜಿಲ್ಲಾಡಳಿತ ವರ್ಷದ ಕೊನೆಯ ದಿನ ಅಂದರೆ 30 ಅಥವಾ 31ರ ಸಂಜೆ 3 ರಿಂದ ಹೊಸ ವರ್ಷದ ಮೊದಲ ಜನ ಅಂದರೆ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ಮಾತ್ರ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದ ಜಿಲ್ಲಾಡಳಿತ ಇದೀಗ ಕೊರೋನಾ ಮೂರನೇ ಅಲೆಯ ಒಮಿಕ್ರೋನ್ಆತಂಕದ ಹಿನ್ನಲೆಯಲ್ಲಿ ಜನವರಿ 1ರಂದು ಕೂಡ ಸಂಪೂರ್ಣ ಗಿರಿಧಾಮವನ್ನು ಬಂದ್ಗೊಳಿಸಲು ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
2022ರ ಜನವರಿ 1 ರ ಹೊಸ ವರ್ಷದ ದಿನಾಚರಣೆಯ ಸಂಬಂಧವಾಗಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಡಿ. 30ರ ಸಂಜೆ 6 ಗಂಟೆಯಿಂದ 2022ರ ಜನವರಿ 2 ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೊರಡಿಸಿರುವ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…