Featured

ಹೊಸ ವರ್ಷ ಸಂಭ್ರಮಾಚರಣೆ – ವಿವಿಧೆಡೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ – Vishwanews24

ಹೊಸ ವರ್ಷ ಸಂಭ್ರಮಾಚರಣೆ – ವಿವಿಧೆಡೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಯಾವ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಕೋವಿಡ್‌ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ಸುತ್ತಲಿನ ಬಹುತೇಕ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇನ್ನು ಡಿಸೆಂಬರ್‌ 31 ಮತ್ತು ಜನವರಿ 1ರಂದು ಈ ಸ್ಥಳಗಳಿಗೆ ಪ್ರವಾಸ ಹೋಗುವುದಕ್ಕೆ ಪ್ಲಾನ್‌ ಮಾಡಿದ್ದರೆ, ಈ ಸ್ಟೋರಿಯನ್ನೊಮ್ಮೆ ಓದಿಕೊಂಡು ಯಾವ ಸ್ಥಳಗಳು ತೆರೆದಿರುತ್ತವೆ ಎನ್ನುವ ಮಾಹಿತಿ ಪಡೆದುಕೊಳ್ಳುವುದು ಅನುಕೂಲ ಆಗಲಿದೆ.

ಈಗಾಗಲೇ ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಯುವಜನತೆ ಹಾಗೂ ಪ್ರವಾಸಿ ಪ್ರಿಯರು ವಿವಿಧ ಸ್ಥಳಗಳಿಗೆ ಹೋಗಲು ಯೋಜನೆ ರೂಪಿಸಿಕೊಂಡಿರುತ್ತಾರೆ. ಆದರೆ, ಸರ್ಕಾರ ಕೆಲವು ಸ್ಥಳಗಳಲ್ಲಿ ಭಾರಿ ಜನದಟ್ಟಣೆ ಉಂಟಾಗಲಿರುವುದನ್ನು ತಡೆಗಟ್ಟುವ ಉದ್ದೇಶದಿಂದಲೇ ಪ್ರವಾಸಿ ತಾಣಗಳನ್ನು ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಬಂದ್‌ ಮಾಡಿದೆ. ಈ ಕುರಿತಂತೆ ಆಯಾ ಜಿಲ್ಲಾಡಳಿತದ ಮುಖ್ಯಸ್ಥರಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಯಾವ್ಯಾವ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ನಂದಿನೆಟ್ಟಕ್ಕೆ ಪ್ರವಾಸಿಗರಿಗೆ ಅವಕಾಶವಿಲ್ಲ: ಬೆಂಗಳೂರಿನಿಂದ ಅನತಿ ದೂರದಲ್ಲಿರುವ ನಿಸರ್ಗ ಪ್ರಿಯರ ಮತ್ತು ಚಾರಣಿಗರ ಪ್ರೀತಿಯ ಪ್ರವಾಸಿ ತಾಣ ನಂದಿ ಬೆಟ್ಟವನ್ನು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂದ್‌ ಮಾಡಲಾಗಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1 ಬೆಳಿಗ್ಗೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ನಂದಿಬೆಟ್ಟದ ಮೇಲೆ ಕೊಠಡಿಗಳಲ್ಲಿ ತಂಗಲು ಅವಕಾಶವಿಲ್ಲ. ಡಿಸೆಂಬರ್ 31 ರಂದು ರೂಂ ಬುಕಿಂಗ್ ಗೆ ಅವಕಾಶವಿಲ್ಲ. ಸಂಜೆ ಅಥವಾ ನಾಳೆ ಅಧಿಕೃತ ಅದೇಶ ಹೊರಬೀಳಲಿದೆ. ಈ ಬಗ್ಗೆ ಪ್ರವೇಶ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗೆ ಚಿಕ್ಕಬಳ್ಳಾಪುರ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯ ಪ್ರವಾಸಿ ತಾಣಗಳು ಬಂದ್‌: ಇನ್ನು ಬೆಂಗಳೂರಿನ ನೆರೆಹೊರೆ ಜಿಲ್ಲೆಯಾಗಿರುವ ತುಮಕೂರು ಜಿಲ್ಲೆಯಲ್ಲಿ ಹಲವು ಚಾರಣ, ನೈಸರ್ಗಿಕ ಮತ್ತು ಧಾರ್ಮಿಕ ಪ್ರವಾಸಿ ತಾಣಗಳಿವೆ. ಇಂತಹ ಪ್ರದೇಶಗಳಿಗೆ ಎರಡು ದಿನ ಜಿಲ್ಲಾಡಳಿತ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ತುಮಕೂರು ಜಿಲ್ಲೆಯ ದೇವರಾಯನದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟದಲ್ಲಿ ಪ್ರವೇಶ ನಿರ್ಬಂಧ ಮಾಡಲಾಗಿದೆ. ಡಿ.31 ಬೆಳಗ್ಗೆ 8 ಗಂಟೆಯಿಂದ ಜನವರಿ 2 ತಾರೀಕು ಬೆಳಗ್ಗೆ 8 ಗಂಟೆವರೆಗೂ ನಿರ್ಬಂಧ ಮುಂದುವರಿಯಲಿದೆ.

ಹೊಸ ವರ್ಷಾಚರಣೆ ಹಿನ್ನೆಲೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ದೇವರಾಯನದುರ್ಗದಲ್ಲಿ ತಿರುವಿನ ರಸ್ತೆ ಇರುವುದರಿಂದ ಅಪಘಾತ ಸಂಭವಿಸಲಿದೆ. ಜನರು ಗುಂಪು ಗುಂಪಾಗಿ ಸೇರುವುದರಿಂದ ವನ್ಯಜೀವಿಗಳಿಗೆ ತೊಂದರೆಯಾಗಲಿದೆ.‌ ಪ್ರವಾಸಿ ತಾಣಗಳ ಜಾಲಿ ರೇಡ್ ಗೆ ತುಮಕೂರು ಜಿಲ್ಲಾಢಳಿತ ತಂದಿದೆ. ಹೊಸ ವರ್ಷಾಚರಣೆ ನೆಪದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವ ಸಾಧ್ಯತೆಯೂ ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ದೇವರಾಯನದುರ್ಗ ಹಾಗೂ ನಾಮದ ಚಿಲುಮೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಎಂದಿನಂತೆ ದಿನನಿತ್ಯ ಸಂಚರಿಸುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ರಾತ್ರಿ ಪ್ರವೇಶ ನಿಷೇಧ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಡಿ. 31ರ ರಾತ್ರಿ 9 ಗಂಟೆ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಮಾಡಲಾಗುತ್ತದೆ. ನಂತರ ಜನವರಿ 1ರ ಬೆಳಗ್ಗೆ 6 ಗಂಟೆ ನಂತರ ಸಾರ್ವಜನಿಕರು ಮತ್ತು ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ರಮೇಶ್ ಆದೇಶ ಹೊರಡಿಸಿದ್ದಾರೆ.

ವಿವಿಧೆಡೆ ಪ್ರವಾಸಿ ತಾಣಗಳ ಪ್ರವೇಶ ಮಾಹಿತಿ:

ಆನೇಕಲ್ ಸುತ್ತಮುತ್ತಲಿನ ಬನ್ನೇರುಘಟ್ಟ ಪ್ರವಾಸಿ ತಾಣ ತೆರೆದಿರುತ್ತದೆ,
ಮುತ್ಯಾಲಮಡು ಕೂಡ ಪ್ರವಾಸಿಗರಿಗೆ ಮುಕ್ತವಾಗಿರುತ್ತದೆ.
ಕೊಡಗಿನ ಎಲ್ಲಾ ಪ್ರವಾಸಿ ತಾಣಗಳು ಓಪನ್ ಆಗಿರುತ್ತವೆ.
ಚಿತ್ರದುರ್ಗ ಜಿಲ್ಲೆಯ ಯಾವುದೇ ಪ್ರವಾಸಿ ತಾಣಗಳು ಬಂದ್ ಆಗಿರುವುದಿಲ್ಲ.
ಹೊಸ ವರ್ಷಾಚರಣೆ ನಿಮಿತ್ಯ ಕಲಬುರಗಿ ಜಿಲ್ಲೆಯಲ್ಲಿ ಯಾವುದೇ ಪ್ರವಾಸಿ ತಾಣಗಳು ಬಂದ್ ಮಾಡಲಾಗುತ್ತಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಬಂದ್ ಇಲ್ಲ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಯಾವುದೇ ಪ್ರವಾಸಿ ತಾಣಗಳು ಬಂದ್ ಇಲ್ಲ.
ಕೊಪ್ಪಳ ಜಿಲ್ಲೆಯಲ್ಲಿ ಹೊಸವರ್ಷದ ಆಚರಣೆಗೆ ಮುಕ್ತ ಅವಕಾಶ
ಗದಗ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನ ಬಂದ್ ಮಾಡುತ್ತಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಮುಕ್ತ ಆಗಿರುತ್ತವೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago