ಕೆಲ ತಿಂಗಳಿನಿಂದ ಅಕ್ಷಯ್ ಕುಮಾರ್ ಅವರ ವಿಮಲ್ ಪಾನ್ ಮಸಾಲಾ ಜಾಹೀರಾತು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಸದ್ದು ಮಾಡಿತ್ತು. ಈ ಜಾಹೀರಾತಿನಲ್ಲಿ ಇದರಿಂದ ಅಕ್ಷಯ್ ಕುಮಾರ್ ಸಕತ್ ಟ್ರೋಲ್ ಕೂಡ ಆಗಿದ್ದರು. ಈ ಜಾಹೀರಾತಿನಲ್ಲಿ ಬಾಲಿವುಡ್ ಕಿಂಗ್ ಎಂದೇ ಖ್ಯಾತಿ ಪಡೆದಿರುವ ಶಾರುಖ್ ಖಾನ್ ಹಾಗೂ ಅಜಯ್ ದೇವಗನ್ ಕೂಡ ಇದ್ದಾರೆ. ಈ ಮೂವರ ಜೋಡಿ ವಿಮಲ್ ಪಾನ್ ಮಸಾಲಾ ಜಾಹೀರಾತು ಮಾಡುತ್ತಾ ಬಂದಿದ್ದು ಬಹಳ ವರ್ಷಗಳೇ ಕಳೆದಿವೆ. ಇವರಿಂದ ಪ್ರಭಾವಿತರಾಗಿ ಇದರ ಚಟಕ್ಕೆ ದಾಸರಾಗಿರುವವರೂ ಲೆಕ್ಕವಿಲ್ಲದಷ್ಟು. ಯಾವಾಗಲೂ ಫಿಟ್ನೆಸ್ ಬಗ್ಗೆ ಮಾತನಾಡುವ ಅಕ್ಷಯ್ ಕುಮಾರ್ ಗುಟ್ಕಾ ಜಾಹೀರಾತಿನಲ್ಲಿ ನಟಿಸಿದ್ದು ಸರಿ ಅಲ್ಲ ಅವರ ಅಭಿಮಾನಿಗಳು ಸಾಕಷ್ಟು ಟೀಕಿಸಿದ್ದರು. ಇದಾದ ಬೆನ್ನಲ್ಲೇ ವಿಮಲ್ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಅಕ್ಷಯ್ ಹೇಳಿದ್ದರು.
2022ರ ಏಪ್ರಿಲ್ನಲ್ಲಿ ಟ್ವೀಟ್ ಮಾಡಿದ್ದ ಅಕ್ಷಯ್, ‘ದಯವಿಟ್ಟು ನನ್ನ ಕ್ಷಮಿಸಿ. ಎಲ್ಲರ ಬಳಿ ನಾನು ಕ್ಷಮೆ ಕೇಳುತ್ತೇನೆ. ನೀವು ನೀಡಿರುವ ಎಲ್ಲಾ ಪ್ರತಿಕ್ರಿಯೆ ನನ್ನ ಮೇಲೆ ಪರಿಣಾಮ ಬೀರಿದೆ. ನಾನು ತಂಬಾಕು ಸೇವನೆ ಉತ್ತೇಜಿಸುವುದಿಲ್ಲ. ಮಾನವೀಯತೆಯ ಕಾರಣದಿಂದ ನಾನು ಈ ಅಡ್ವಟೈಸ್ಮೆಂಟ್ನಿಂದ ಹಿಂದೆ ಸರಿಯುತ್ತೇನೆ. ಇದರ ಸಂಭಾವನೆಯನ್ನು ಒಳ್ಳೆಯ ಉದ್ದೇಶಕ್ಕೆ ನೀಡಲು ಬಯಸಿದ್ದೇನೆ. ಬ್ರ್ಯಾಂಡ್ನವರು ಒಪ್ಪಂದದ ಅವಧಿ ಮುಗಿಯುವವರೆಗೂ ಆ ಜಾಹೀರಾತನ್ನು ಟೆಲಿಕಾಸ್ಟ್ ಮಾಡಬಹುದು. ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆಯಿಂದ ಇರುತ್ತೇನೆ’ ಎಂದಿದ್ದರು ಅಕ್ಷಯ್ ಕುಮಾರ್.
ಅದರಂತೆ ಈಗ ಅವರು ಈ ಜಾಹೀರಾತಿನಿಂದ ಹೊರಕ್ಕೆ ಬಂದಿದ್ದಾರೆ. ಆದರೆ ಅವರ ಜಾಗಕ್ಕೆ ಈಗ ಬಾಲಿವುಡ್ನ ಇನ್ನೋರ್ವ ನಟ ಟೈಗರ್ ಶ್ರಾಫ್ ಎಂಟ್ರಿ ಆಗಿದೆ! ಈ ಮೊದಲು ಅಮಿತಾಭ್ ಬಚ್ಚನ್ ಕೂಡ ಪಾನ್ ಮಸಾಲ ಜಾಹೀರಾತಲ್ಲಿ ಕಾಣಿಸಿಕೊಂಡು ವಿರೋಧಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಆ ಬ್ರ್ಯಾಂಡ್ನಿಂದ ಹಿಂದೆ ಸರಿದಿದ್ದರು. ಅದೇನೇ ಇದ್ದರೂ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಗಪ್ಚುಪ್ ಆಗಿದ್ದು, ಜಾಹೀರಾತಿನಲ್ಲಿ ಮುಂದುವರೆದಿದ್ದಾರೆ. ಇದರಿಂದ ಇವರ ಅಭಿಮಾನಿಗಳಿಗೆ ಸಹಜವಾಗಿ ಬೇಸರ ಮೂಡಿಸಿದೆ. ಇಂಥವರನ್ನು ದೇವರು ಎಂದು ಪೂಜಿಸುತ್ತಾರೆ ಎಷ್ಟೋ ಮಂದಿ, ನಾಚಿಕೆ ಇಲ್ಲದವರು ಇವರು. ತಾವುಕೋಟಿ ಕೋಟಿ ಹಣ ಪಡೆದು ತಮ್ಮನ್ನು ನಂಬಿ ಪೂಜಿಸುವವರ ಜೀವವನ್ನೇ ಬಲಿ ತೆಗೆಯುವ ಕಟುಕರು ಎಂದೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಹೊರಹಾಕಲಾಗಿತ್ತು. ಇದರ ಬೆನ್ನಲ್ಲೇ ಅಕ್ಷಯ್ ಕುಮಾರ್ ಜಾಹೀರಾತಿನಿಂದ ಹಿಂದಕ್ಕೆ ಸರಿದಿದ್ದು, ಇದೀಗ ಒಪ್ಪಂದ ಮುಗಿದಿದೆ ಎಂದು ತಿಳಿಸಿದ್ದಾರೆ. ಟೈಗರ್ ಶ್ರಾಫ್ ತಾವು ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಾಗಿ ಮುಂದೆ ಬಂದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…