Featured

ಹೊಸ ವಿಮಲ್ ಜಾಹೀರಾತಿನಲ್ಲಿ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಜೊತೆ ಟೈಗರ್ ಶ್ರಾಫ್ ಎಂಟ್ರಿ – Vishwanews24

ಹೊಸ ವಿಮಲ್ ಜಾಹೀರಾತಿನಲ್ಲಿ  ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಜೊತೆ ಟೈಗರ್ ಶ್ರಾಫ್ ಎಂಟ್ರಿ

ಕೆಲ ತಿಂಗಳಿನಿಂದ ಅಕ್ಷಯ್​ ಕುಮಾರ್​ ಅವರ ವಿಮಲ್​ ಪಾನ್​ ಮಸಾಲಾ ಜಾಹೀರಾತು ಸೋಷಿಯಲ್​ ಮೀಡಿಯಾದಲ್ಲಿ ಸಕತ್ ಸದ್ದು ಮಾಡಿತ್ತು. ಈ ಜಾಹೀರಾತಿನಲ್ಲಿ ಇದರಿಂದ ಅಕ್ಷಯ್​ ಕುಮಾರ್​ ಸಕತ್​ ಟ್ರೋಲ್​ ಕೂಡ ಆಗಿದ್ದರು. ಈ ಜಾಹೀರಾತಿನಲ್ಲಿ ಬಾಲಿವುಡ್​ ಕಿಂಗ್​ ಎಂದೇ ಖ್ಯಾತಿ ಪಡೆದಿರುವ ಶಾರುಖ್​ ಖಾನ್​ ಹಾಗೂ ಅಜಯ್ ದೇವಗನ್​ ಕೂಡ ಇದ್ದಾರೆ. ಈ ಮೂವರ ಜೋಡಿ ವಿಮಲ್ ಪಾನ್​ ಮಸಾಲಾ ಜಾಹೀರಾತು ಮಾಡುತ್ತಾ ಬಂದಿದ್ದು ಬಹಳ ವರ್ಷಗಳೇ ಕಳೆದಿವೆ. ಇವರಿಂದ ಪ್ರಭಾವಿತರಾಗಿ ಇದರ ಚಟಕ್ಕೆ ದಾಸರಾಗಿರುವವರೂ ಲೆಕ್ಕವಿಲ್ಲದಷ್ಟು. ಯಾವಾಗಲೂ ಫಿಟ್​ನೆಸ್ ಬಗ್ಗೆ ಮಾತನಾಡುವ ಅಕ್ಷಯ್ ಕುಮಾರ್ ಗುಟ್ಕಾ ಜಾಹೀರಾತಿನಲ್ಲಿ ನಟಿಸಿದ್ದು ಸರಿ ಅಲ್ಲ ಅವರ ಅಭಿಮಾನಿಗಳು ಸಾಕಷ್ಟು ಟೀಕಿಸಿದ್ದರು. ಇದಾದ ಬೆನ್ನಲ್ಲೇ ವಿಮಲ್​ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಅಕ್ಷಯ್​ ಹೇಳಿದ್ದರು.

2022ರ ಏಪ್ರಿಲ್​ನಲ್ಲಿ ಟ್ವೀಟ್ ಮಾಡಿದ್ದ ಅಕ್ಷಯ್, ‘ದಯವಿಟ್ಟು ನನ್ನ ಕ್ಷಮಿಸಿ. ಎಲ್ಲರ ಬಳಿ ನಾನು ಕ್ಷಮೆ ಕೇಳುತ್ತೇನೆ. ನೀವು ನೀಡಿರುವ ಎಲ್ಲಾ ಪ್ರತಿಕ್ರಿಯೆ ನನ್ನ ಮೇಲೆ ಪರಿಣಾಮ ಬೀರಿದೆ. ನಾನು ತಂಬಾಕು ಸೇವನೆ ಉತ್ತೇಜಿಸುವುದಿಲ್ಲ. ಮಾನವೀಯತೆಯ ಕಾರಣದಿಂದ ನಾನು ಈ ಅಡ್ವಟೈಸ್​ಮೆಂಟ್​ನಿಂದ ಹಿಂದೆ ಸರಿಯುತ್ತೇನೆ. ಇದರ ಸಂಭಾವನೆಯನ್ನು ಒಳ್ಳೆಯ ಉದ್ದೇಶಕ್ಕೆ ನೀಡಲು ಬಯಸಿದ್ದೇನೆ. ಬ್ರ್ಯಾಂಡ್​ನವರು ಒಪ್ಪಂದದ ಅವಧಿ ಮುಗಿಯುವವರೆಗೂ ಆ ಜಾಹೀರಾತನ್ನು ಟೆಲಿಕಾಸ್ಟ್ ಮಾಡಬಹುದು. ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆಯಿಂದ ಇರುತ್ತೇನೆ’ ಎಂದಿದ್ದರು ಅಕ್ಷಯ್ ಕುಮಾರ್.

ಅದರಂತೆ ಈಗ ಅವರು ಈ ಜಾಹೀರಾತಿನಿಂದ ಹೊರಕ್ಕೆ ಬಂದಿದ್ದಾರೆ. ಆದರೆ ಅವರ ಜಾಗಕ್ಕೆ ಈಗ ಬಾಲಿವುಡ್​ನ ಇನ್ನೋರ್ವ ನಟ ಟೈಗರ್​ ಶ್ರಾಫ್​ ಎಂಟ್ರಿ ಆಗಿದೆ! ಈ ಮೊದಲು ಅಮಿತಾಭ್ ಬಚ್ಚನ್ ಕೂಡ ಪಾನ್ ಮಸಾಲ ಜಾಹೀರಾತಲ್ಲಿ ಕಾಣಿಸಿಕೊಂಡು ವಿರೋಧಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಆ ಬ್ರ್ಯಾಂಡ್​ನಿಂದ ಹಿಂದೆ ಸರಿದಿದ್ದರು. ಅದೇನೇ ಇದ್ದರೂ ಶಾರುಖ್​ ಖಾನ್​ ಮತ್ತು ಅಜಯ್​ ದೇವಗನ್​ ಗಪ್​ಚುಪ್​ ಆಗಿದ್ದು, ಜಾಹೀರಾತಿನಲ್ಲಿ ಮುಂದುವರೆದಿದ್ದಾರೆ. ಇದರಿಂದ ಇವರ ಅಭಿಮಾನಿಗಳಿಗೆ ಸಹಜವಾಗಿ ಬೇಸರ ಮೂಡಿಸಿದೆ. ಇಂಥವರನ್ನು ದೇವರು ಎಂದು ಪೂಜಿಸುತ್ತಾರೆ ಎಷ್ಟೋ ಮಂದಿ, ನಾಚಿಕೆ ಇಲ್ಲದವರು ಇವರು. ತಾವುಕೋಟಿ ಕೋಟಿ ಹಣ ಪಡೆದು ತಮ್ಮನ್ನು ನಂಬಿ ಪೂಜಿಸುವವರ ಜೀವವನ್ನೇ ಬಲಿ ತೆಗೆಯುವ ಕಟುಕರು ಎಂದೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಹೊರಹಾಕಲಾಗಿತ್ತು. ಇದರ ಬೆನ್ನಲ್ಲೇ ಅಕ್ಷಯ್​ ಕುಮಾರ್​ ಜಾಹೀರಾತಿನಿಂದ ಹಿಂದಕ್ಕೆ ಸರಿದಿದ್ದು, ಇದೀಗ ಒಪ್ಪಂದ ಮುಗಿದಿದೆ ಎಂದು ತಿಳಿಸಿದ್ದಾರೆ. ಟೈಗರ್​ ಶ್ರಾಫ್​ ತಾವು ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಾಗಿ ಮುಂದೆ ಬಂದಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

8 hours ago