ನವದೆಹಲಿ: ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಅನುಮೋದನೆ ನೀಡಿದೆ.
ಪರಿಸರ ಇಲಾಖೆಯ ಒಪ್ಪಿಗೆಯನ್ನ ಎತ್ತಿ ಹಿಡಿದಿರುವ ನ್ಯಾಯಾಲಯ, ಹೊಸ ಸಂಸತ್ ಭವನ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಹೊಸ ಸಂಸತ್ ಭವನಕ್ಕಿದ್ದ ಅಡೆತಡೆಗಳೆಲ್ಲಾ ದೂರವಾಗಿವೆ. ಅದ್ರಂತೆ, ವಿಸ್ತಾ ಯೋಜನೆಯ ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಯೋಜನೆಗಳಿಗೆ ನ್ಯಾಯಾಲಯದಿಂದ ಒಪ್ಪಿಗೆ ದೊರೆತಿದೆ.
ಡಿಡಿಎ ಕಾಯ್ದೆ ಪ್ರಕಾರ ಕೇಂದ್ರದ ಅಧಿಕಾರ ಚಲಾಯಿಸುವುದು ನ್ಯಾಯ ಮತ್ತು ಸೂಕ್ತ ಮತ್ತು ಮಾರ್ಚ್ ನ ಅಧಿಸೂಚನೆಗಳು ಸೇರಿದಂತೆ 2021ರ ಮಾಸ್ಟರ್ ಪ್ಲಾನ್ʼನ ಭೂ ಬಳಕೆಯಲ್ಲಿ ಮಾರ್ಪಾಡುಗಳು ದೃಢವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಟ್ಟಡ ಕಾಮಗಾರಿ ಆರಂಭವಾಗಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಅಗತ್ಯ ಎಂದು ಕೋರ್ಟ್ ಹೇಳಿದ್ದು, ಪಾರಂಪರಿಕ ಸಮಿತಿಯಿಂದ ಅನುಮತಿ ಪಡೆಯಲು ಎಲ್ಲ ಯೋಜನೆ ಪ್ರತಿಪಾದಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಪರಿಸರ ಸಮಿತಿಯ ಶಿಫಾರಸುಗಳು ಸರಿಯಾಗಿವೆ ಎಂದು ಕೋರ್ಟ್ ಹೇಳಿದ್ದು, ಕೇಂದ್ರ ವಿಸ್ತಾ ಯೋಜನೆಯ ಅವಿಭಾಜ್ಯ ಅಂಗವಾಗಿ ರುವ ಸ್ಮೋಗ್ ಟವರ್ ಗಳನ್ನು ಪ್ರಾಜೆಕ್ಟ್ ಪ್ರತಿಪಾದಕರು ಸ್ಥಾಪಿಸಲಿದ್ದು, ಪರಿಸರ ಸ್ನೇಹಿ ನಿರ್ಮಾಣ ಸಾಮಗ್ರಿಯನ್ನು ಬಳಸಲಾಗುವುದು ಎಂದು ನ್ಯಾಯಾಲಯ ಮಂಗಳವಾರ ತಿಳಿಸಿದೆ. ಮುಂದಿನ ಯಾವುದೇ ಯೋಜನೆಗಳಿಗೂ ಪರಿಸರ ಸಚಿವಾಲಯ ಇದೇ ರೀತಿಯ ನಿರ್ದೇಶನಗಳನ್ನು ನೀಡಲಿದೆ.
http://ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಉದ್ಘಾಟಿಸಿದ ಪ್ರಧಾನಿ ಮೋದಿ -Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…