ನವದೆಹಲಿ: ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಅನುಮೋದನೆ ನೀಡಿದೆ.
ಪರಿಸರ ಇಲಾಖೆಯ ಒಪ್ಪಿಗೆಯನ್ನ ಎತ್ತಿ ಹಿಡಿದಿರುವ ನ್ಯಾಯಾಲಯ, ಹೊಸ ಸಂಸತ್ ಭವನ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಹೊಸ ಸಂಸತ್ ಭವನಕ್ಕಿದ್ದ ಅಡೆತಡೆಗಳೆಲ್ಲಾ ದೂರವಾಗಿವೆ. ಅದ್ರಂತೆ, ವಿಸ್ತಾ ಯೋಜನೆಯ ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಯೋಜನೆಗಳಿಗೆ ನ್ಯಾಯಾಲಯದಿಂದ ಒಪ್ಪಿಗೆ ದೊರೆತಿದೆ.
ಡಿಡಿಎ ಕಾಯ್ದೆ ಪ್ರಕಾರ ಕೇಂದ್ರದ ಅಧಿಕಾರ ಚಲಾಯಿಸುವುದು ನ್ಯಾಯ ಮತ್ತು ಸೂಕ್ತ ಮತ್ತು ಮಾರ್ಚ್ ನ ಅಧಿಸೂಚನೆಗಳು ಸೇರಿದಂತೆ 2021ರ ಮಾಸ್ಟರ್ ಪ್ಲಾನ್ʼನ ಭೂ ಬಳಕೆಯಲ್ಲಿ ಮಾರ್ಪಾಡುಗಳು ದೃಢವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಟ್ಟಡ ಕಾಮಗಾರಿ ಆರಂಭವಾಗಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಅಗತ್ಯ ಎಂದು ಕೋರ್ಟ್ ಹೇಳಿದ್ದು, ಪಾರಂಪರಿಕ ಸಮಿತಿಯಿಂದ ಅನುಮತಿ ಪಡೆಯಲು ಎಲ್ಲ ಯೋಜನೆ ಪ್ರತಿಪಾದಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಪರಿಸರ ಸಮಿತಿಯ ಶಿಫಾರಸುಗಳು ಸರಿಯಾಗಿವೆ ಎಂದು ಕೋರ್ಟ್ ಹೇಳಿದ್ದು, ಕೇಂದ್ರ ವಿಸ್ತಾ ಯೋಜನೆಯ ಅವಿಭಾಜ್ಯ ಅಂಗವಾಗಿ ರುವ ಸ್ಮೋಗ್ ಟವರ್ ಗಳನ್ನು ಪ್ರಾಜೆಕ್ಟ್ ಪ್ರತಿಪಾದಕರು ಸ್ಥಾಪಿಸಲಿದ್ದು, ಪರಿಸರ ಸ್ನೇಹಿ ನಿರ್ಮಾಣ ಸಾಮಗ್ರಿಯನ್ನು ಬಳಸಲಾಗುವುದು ಎಂದು ನ್ಯಾಯಾಲಯ ಮಂಗಳವಾರ ತಿಳಿಸಿದೆ. ಮುಂದಿನ ಯಾವುದೇ ಯೋಜನೆಗಳಿಗೂ ಪರಿಸರ ಸಚಿವಾಲಯ ಇದೇ ರೀತಿಯ ನಿರ್ದೇಶನಗಳನ್ನು ನೀಡಲಿದೆ.
http://ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಉದ್ಘಾಟಿಸಿದ ಪ್ರಧಾನಿ ಮೋದಿ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…