ಹೊಸ ಸಿನಿಮಾಕ್ಕೆ ತಂಗಿ ಪಾತ್ರ ಮಾಡಲು ಆಡಿಶನ್​ ಇದೆ ಎಂದು ನಂಬಿಸಿ ಕರೆದು ಯುವತಿಯ ಮೇಲೆ ಅತ್ಯಾಚಾರ ; ಕನ್ನಡದ ಫೇಮಸ್ ಡ್ಯಾನ್ಸ್ ಮಾಸ್ಟರ್ ಬಂಧನ -Vishwanews24

ಬೆಂಗಳೂರು: ಕನ್ನಡದ ಖ್ಯಾತ ರಿಯಾಲಿಟಿ ಶೋಗಳ ಕೊರಿಯೋಗ್ರಾಫರ್ ಒಬ್ಬ ಸ್ಟಾರ್ ನಟನ ತಂಗಿಯ ಪಾತ್ರಕ್ಕೆ ಚಿತ್ರದ ಆಡಿಶನ್ ಇದೆ ಎಂದು ಕರೆಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಕನ್ನಡದ ಫೇಮಸ್ ಡ್ಯಾನ್ಸ್ ಮಾಸ್ಟರ್ ಪವನ್ ಯುವತಿಯನ್ನ ನಂಬಿಸಿ ದೈಹಿಕವಾಗಿ ಕಿರುಕುಳ ನೀಡಿದ್ದಾನೆ. ಇದೀಗ ಈತನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪವನ್ ಅನೇಕ ರಿಯಾಲಿಟಿ ಶೋಗಳಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದನು.

ಆರೋಪಿ ಪವನ್ ನಾಗರಭಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಡ್ಯಾನ್ಸ್ ಕ್ಲಾಸ್ ಹೊಂದಿದ್ದನು. ಇದೇ ಡ್ಯಾನ್ಸ್ ಕ್ಲಾಸ್‍ನಲ್ಲಿ ಕಳೆದ ಮೂರು ವರ್ಷಗಳಿಂದ ಸಂತ್ರಸ್ತ ಯುವತಿ ಡ್ಯಾನ್ಸ್ ಕಲಿಯುತ್ತಿದ್ದರು. ಕಳೆದ ಜನವರಿ 12 ರಂದು ಯುವತಿಗೆ ಪವನ್ ಫೋನ್ ಮಾಡಿದ್ದನು. ಆಗ ಸ್ಟಾರ್ ನಟರೊಬ್ಬರ ಹೊಸ ಸಿನಿಮಾಗೆ ತಂಗಿ ಪಾತ್ರದ ಆಡಿಶನ್ ಇದೆ ಎಂದು ಹೇಳಿ ತನ್ನ ಡ್ಯಾನ್ಸ್ ಕ್ಲಾಸಿಗೆ ಯುವತಿಯನ್ನು ಕರೆಸಿಕೊಂಡಿದ್ದನು.

ಯುವತಿ ಬರುವ ಮೊದಲೇ ಆರೋಪಿ ಪವನ್ ತನ್ನ ಗೆಳೆಯನೊಬ್ಬನಿಗೆ ಫೋನ್ ಮಾಡಿ ನಿರ್ದೇಶಕನ ಸೋಗಿನಲ್ಲಿ ಯುವತಿಯ ಜೊತೆ ಮಾತನಾಡುವಂತೆ ಹೇಳಿದ್ದಾನೆ. ಅದರಂತೆಯೇ ಆತನ ಗೆಳೆಯ ನೀನು ಸ್ಟಾರ್ ನಟನ ಮುಂದಿನ ಸಿನಿಮಾಗೆ ತಂಗಿ ಪಾತ್ರಕ್ಕೆ ಆಯ್ಕೆಯಾಗಿದ್ದೀಯಾ ಎಂದು ನಂಬಿಸಿದ್ದಾನೆ. ನಂತರ ಮತ್ತು ಬರುವ ಔಷಧಿಯನ್ನು ನೀರಿನಲ್ಲಿ ಬೆರೆಸಿ ಯುವತಿಗೆ ಕುಡಿಸಿದ್ದಾನೆ. ಈ ವೇಳೆ ಡ್ಯಾನ್ಸ್ ಕ್ಲಾಸ್‍ನಲ್ಲಿ ಯುವತಿಗೆ ಮೊಬೈಲ್‍ನಲ್ಲಿ ಅಶ್ಲೀಲ ವಿಡಿಯೋಗಳನ್ನ ತೋರಿಸಿದ್ದಾನೆ. ನೀರು ಕುಡಿದ ಬಳಿಕ ಯುವತಿ ಪ್ರಜ್ಞೆ ತಪ್ಪಿದ್ದಾಗ ಆರೋಪಿ ಪವನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಇದೀಗ ಸಂತ್ರಸ್ತ ಯುವತಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಪವನ್ ವಿರುದ್ಧ ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ), 376(ಅತ್ಯಾಚಾರ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ಆರೋಪಿಯನ್ನ ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

Vishwa News 24

Recent Posts

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

7 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

22 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

3 hours ago