ಬೆಂಗಳೂರು: ಕನ್ನಡದ ಖ್ಯಾತ ರಿಯಾಲಿಟಿ ಶೋಗಳ ಕೊರಿಯೋಗ್ರಾಫರ್ ಒಬ್ಬ ಸ್ಟಾರ್ ನಟನ ತಂಗಿಯ ಪಾತ್ರಕ್ಕೆ ಚಿತ್ರದ ಆಡಿಶನ್ ಇದೆ ಎಂದು ಕರೆಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಕನ್ನಡದ ಫೇಮಸ್ ಡ್ಯಾನ್ಸ್ ಮಾಸ್ಟರ್ ಪವನ್ ಯುವತಿಯನ್ನ ನಂಬಿಸಿ ದೈಹಿಕವಾಗಿ ಕಿರುಕುಳ ನೀಡಿದ್ದಾನೆ. ಇದೀಗ ಈತನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪವನ್ ಅನೇಕ ರಿಯಾಲಿಟಿ ಶೋಗಳಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದನು.
ಆರೋಪಿ ಪವನ್ ನಾಗರಭಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಡ್ಯಾನ್ಸ್ ಕ್ಲಾಸ್ ಹೊಂದಿದ್ದನು. ಇದೇ ಡ್ಯಾನ್ಸ್ ಕ್ಲಾಸ್ನಲ್ಲಿ ಕಳೆದ ಮೂರು ವರ್ಷಗಳಿಂದ ಸಂತ್ರಸ್ತ ಯುವತಿ ಡ್ಯಾನ್ಸ್ ಕಲಿಯುತ್ತಿದ್ದರು. ಕಳೆದ ಜನವರಿ 12 ರಂದು ಯುವತಿಗೆ ಪವನ್ ಫೋನ್ ಮಾಡಿದ್ದನು. ಆಗ ಸ್ಟಾರ್ ನಟರೊಬ್ಬರ ಹೊಸ ಸಿನಿಮಾಗೆ ತಂಗಿ ಪಾತ್ರದ ಆಡಿಶನ್ ಇದೆ ಎಂದು ಹೇಳಿ ತನ್ನ ಡ್ಯಾನ್ಸ್ ಕ್ಲಾಸಿಗೆ ಯುವತಿಯನ್ನು ಕರೆಸಿಕೊಂಡಿದ್ದನು.
ಯುವತಿ ಬರುವ ಮೊದಲೇ ಆರೋಪಿ ಪವನ್ ತನ್ನ ಗೆಳೆಯನೊಬ್ಬನಿಗೆ ಫೋನ್ ಮಾಡಿ ನಿರ್ದೇಶಕನ ಸೋಗಿನಲ್ಲಿ ಯುವತಿಯ ಜೊತೆ ಮಾತನಾಡುವಂತೆ ಹೇಳಿದ್ದಾನೆ. ಅದರಂತೆಯೇ ಆತನ ಗೆಳೆಯ ನೀನು ಸ್ಟಾರ್ ನಟನ ಮುಂದಿನ ಸಿನಿಮಾಗೆ ತಂಗಿ ಪಾತ್ರಕ್ಕೆ ಆಯ್ಕೆಯಾಗಿದ್ದೀಯಾ ಎಂದು ನಂಬಿಸಿದ್ದಾನೆ. ನಂತರ ಮತ್ತು ಬರುವ ಔಷಧಿಯನ್ನು ನೀರಿನಲ್ಲಿ ಬೆರೆಸಿ ಯುವತಿಗೆ ಕುಡಿಸಿದ್ದಾನೆ. ಈ ವೇಳೆ ಡ್ಯಾನ್ಸ್ ಕ್ಲಾಸ್ನಲ್ಲಿ ಯುವತಿಗೆ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನ ತೋರಿಸಿದ್ದಾನೆ. ನೀರು ಕುಡಿದ ಬಳಿಕ ಯುವತಿ ಪ್ರಜ್ಞೆ ತಪ್ಪಿದ್ದಾಗ ಆರೋಪಿ ಪವನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಇದೀಗ ಸಂತ್ರಸ್ತ ಯುವತಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಪವನ್ ವಿರುದ್ಧ ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ), 376(ಅತ್ಯಾಚಾರ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ಆರೋಪಿಯನ್ನ ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…