ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.
ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಇಂದಿನಿಂದಲೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತಿದೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು.
ಈ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆಯ ಮಾಹಿತಿ ಬಿಡುಗಡೆ ಮಾಡಿದ್ದು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅರ್ಜಿ ಸಲ್ಲಿಕೆಯೂ ಆರಂಭಗೊಂಡಿಲ್ಲ ಅಂತ ಸ್ಪಷ್ಟ ಪಡಿಸಿದೆ.
ಇನ್ನೂ ಇಂದಿನಿಂದ ಕೇವಲ ಬಡ ರೋಗಿಗಳು ಚಿಕಿತ್ಸೆ ಪಡೆಯೋದಕ್ಕಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ಬಯಸುವಂತವರು ಇಂದಿನಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಂತ ತಿಳಿಸಿದೆ.
ಹೊಸದಾಗಿ ಬಿಪಿಎಲ್ ನಂಬಿದ ಅನೇಕ ಜನರು, ಬೆಂಗಳೂರಿನಲ್ಲಿ ಬೆಂಗಳೂರು ಒನ್ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಮತ್ಯಾವುದೇ ಆನ್ ಲೈನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ದಾಂಗುಡಿಯಿಟ್ಟಿದ್ದರು. ಆದರೆ, ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವೆಬ್ ಸೈಟ್ ನಲ್ಲಿ ಅವಕಾಶ ಇಲ್ಲದೇ ಇರುವುದನ್ನು ಗಮನಿಸಿ ನಿರಾಶರಾಗಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಸ್ಪಷ್ಟನೆ ನೀಡಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…