Featured

ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ: ರಾಜ್ಯ ಆಹಾರ ಇಲಾಖೆ ಸ್ಪಷ್ಟನೆ – vishwanews24 https://wp.me/p9KQap-oK6

ಚಿಕಿತ್ಸೆಗಳಿಗೆ ಅಗತ್ಯವಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡುಗಳಿಗಾಗಿ ಅರ್ಜಿ ಆಹ್ವಾನ..

ಬಿಪಿಎಲ್, ಎಪಿಎಲ್ ಕಾರ್ಡುಗಳ ಹೆಸರು, ವಿಳಾಸ ಪರಿಷ್ಕರಣೆಗೆ ಅರ್ಜಿ ಸಲ್ಲಿಸಲು ಸಹ ಅವಕಾಶ..

ವದಂತಿ ನಂಬಬೇಡಿ ಎಂದ ರಾಜ್ಯ ಆಹಾರ ಇಲಾಖೆ..

ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.

ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಇಂದಿನಿಂದಲೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತಿದೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು.

ಈ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆಯ ಮಾಹಿತಿ ಬಿಡುಗಡೆ ಮಾಡಿದ್ದು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅರ್ಜಿ ಸಲ್ಲಿಕೆಯೂ ಆರಂಭಗೊಂಡಿಲ್ಲ ಅಂತ ಸ್ಪಷ್ಟ ಪಡಿಸಿದೆ.

ಇನ್ನೂ ಇಂದಿನಿಂದ ಕೇವಲ ಬಡ ರೋಗಿಗಳು ಚಿಕಿತ್ಸೆ ಪಡೆಯೋದಕ್ಕಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ಬಯಸುವಂತವರು ಇಂದಿನಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಂತ ತಿಳಿಸಿದೆ.

ವದಂತಿ ನಂಬಬೇಡಿ ಎಂದ ಇಲಾಖೆ

ಹೊಸದಾಗಿ ಬಿಪಿಎಲ್ ನಂಬಿದ ಅನೇಕ ಜನರು, ಬೆಂಗಳೂರಿನಲ್ಲಿ ಬೆಂಗಳೂರು ಒನ್ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಮತ್ಯಾವುದೇ ಆನ್ ಲೈನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ದಾಂಗುಡಿಯಿಟ್ಟಿದ್ದರು. ಆದರೆ, ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವೆಬ್ ಸೈಟ್ ನಲ್ಲಿ ಅವಕಾಶ ಇಲ್ಲದೇ ಇರುವುದನ್ನು ಗಮನಿಸಿ ನಿರಾಶರಾಗಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಸ್ಪಷ್ಟನೆ ನೀಡಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago