Featured

ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ: ರಾಜ್ಯ ಆಹಾರ ಇಲಾಖೆ ಸ್ಪಷ್ಟನೆ – vishwanews24 https://wp.me/p9KQap-oK6

ಚಿಕಿತ್ಸೆಗಳಿಗೆ ಅಗತ್ಯವಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡುಗಳಿಗಾಗಿ ಅರ್ಜಿ ಆಹ್ವಾನ..

ಬಿಪಿಎಲ್, ಎಪಿಎಲ್ ಕಾರ್ಡುಗಳ ಹೆಸರು, ವಿಳಾಸ ಪರಿಷ್ಕರಣೆಗೆ ಅರ್ಜಿ ಸಲ್ಲಿಸಲು ಸಹ ಅವಕಾಶ..

ವದಂತಿ ನಂಬಬೇಡಿ ಎಂದ ರಾಜ್ಯ ಆಹಾರ ಇಲಾಖೆ..

ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.

ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಇಂದಿನಿಂದಲೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತಿದೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು.

ಈ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆಯ ಮಾಹಿತಿ ಬಿಡುಗಡೆ ಮಾಡಿದ್ದು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅರ್ಜಿ ಸಲ್ಲಿಕೆಯೂ ಆರಂಭಗೊಂಡಿಲ್ಲ ಅಂತ ಸ್ಪಷ್ಟ ಪಡಿಸಿದೆ.

ಇನ್ನೂ ಇಂದಿನಿಂದ ಕೇವಲ ಬಡ ರೋಗಿಗಳು ಚಿಕಿತ್ಸೆ ಪಡೆಯೋದಕ್ಕಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ಬಯಸುವಂತವರು ಇಂದಿನಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಂತ ತಿಳಿಸಿದೆ.

ವದಂತಿ ನಂಬಬೇಡಿ ಎಂದ ಇಲಾಖೆ

ಹೊಸದಾಗಿ ಬಿಪಿಎಲ್ ನಂಬಿದ ಅನೇಕ ಜನರು, ಬೆಂಗಳೂರಿನಲ್ಲಿ ಬೆಂಗಳೂರು ಒನ್ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಮತ್ಯಾವುದೇ ಆನ್ ಲೈನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ದಾಂಗುಡಿಯಿಟ್ಟಿದ್ದರು. ಆದರೆ, ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವೆಬ್ ಸೈಟ್ ನಲ್ಲಿ ಅವಕಾಶ ಇಲ್ಲದೇ ಇರುವುದನ್ನು ಗಮನಿಸಿ ನಿರಾಶರಾಗಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಸ್ಪಷ್ಟನೆ ನೀಡಿದೆ.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

7 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

43 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

55 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago