ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯುಟಿ ಖಾದರ್ ಅವರು ಸೂಚನೆ ನೀಡಿದ್ದಾರೆ.
ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಹಾಸ್ಟೆಲ್ಗಳು, ಖಾಸಗಿ ಹಾಸ್ಟೆಲ್ಗಳು ಮತ್ತು ಸಹಕಾರಿ ಹಾಸ್ಟೆಲ್ಗಳಲ್ಲಿನ ಆಹಾರ ತಪಾಸಣೆ ಮಾಡಲಾಗುವುದು. ಈ ವೇಳೆ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಬಗ್ಗೆ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಪಿಜಿಗಳಲ್ಲಿಯೂ ಕೂಡ ಟೆಸ್ಟ್ ಮಾಡಿಸುತ್ತೇವೆ. ಎಲ್ಲಾ ಕಡೆಯ ಹಾಸ್ಟೆಲ್, ಪಿಜಿಯಲ್ಲಿ ಫುಡ್ ಟೆಸ್ಟ್ ಮಾಡಿಸುತ್ತೇವೆ. ಇದರ ಜೊತೆಗೆ ಕ್ಯಾಂಟಿರಿಂಗ್ಗಳಲ್ಲಿಯೂ ಟೆಸ್ಟ್ ಮಾಡಿಸುತ್ತೇವೆ. ಬೆಂಗಳೂರು ಕೇಂದ್ರದಲ್ಲಿ ದಾಳಿ ಆಗ್ತಿದೆ. ಜಿಲ್ಲಾ ಕೇಂದ್ರದಲ್ಲಿಯೂ ಕೂಡ ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ತಪಾಸಣೆ ಮಾಡದೇ ಇರಲ್ಲ. ಬರುವಂತಹ ಜನರಿಗೆ ಗುಣಮಟ್ಟದ ಆಹಾರ ಕೊಡಬೇಕು. ಕೊಟ್ಟ ದುಡ್ಡಿಗೆ ಜನರಿಗೆ ಮೋಸ ಮಾಡಬಾರದು. ನಿಯಮ ಉಲ್ಲಂಘನೆಗೆ ತಕ್ಕಂತೆ ಕ್ರಮ ವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…