ಕೊಪ್ಪಳ: ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತದೆ ಎಂಬ ಆಸೆ ಇರುತ್ತದೆ. ಆದರೆ, ಏಕಾಏಕಿ ಟಿಕೆಟ್ ಘೋಷಣೆ ಮಾಡುವುದರಿಂದ ಅರ್ಜಿ ಹಾಕಿದವರಿಗೆ ತೊಂದರೆಯಾಗುತ್ತದೆ. ಒಂದು ಕಡೆ ಅರ್ಜಿಗಳ ಇತ್ಯರ್ಥವಾಗಿಲ್ಲ. ಮತ್ತೊಂದು ಕಡೆ ಇವರಿಗೆ ಮತ ಹಾಕಿ ಎನ್ನುವುದು ಸರಿಯಲ್ಲ ಎಂದರು.
ಹಾಗಾದರೇ ಸಿದ್ದರಾಮಯ್ಯ ಹೆಸರು ಘೋಷಣೆ ಮಾಡಿದ್ದು ತಪ್ಪು ಎನ್ನುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದ ಸತೀಶ ಜಾರಕಿಹೊಳಿ, ನಾನು ತಪ್ಪು ಅನ್ನಬೇಕು, ನೀವು ಅಲ್ಲಿ ಮತ್ತೇನಾದರೂ ಟ್ವಿಸ್ಟ್ ಮಾಡಿ ಕೇಳಬೇಕು. ಇದೆಲ್ಲ ಸರಿ ಇರಲ್ಲ ಎಂದರು.
ಬೆಳಗಾವಿ ಗಡಿ ವಿವಾದ ವಿಚಾರವು ಒಂದು ರೀತಿ ವರ್ಷಕ್ಕೆ ಒಮ್ಮೆ ಮಳೆ ಬಂದ ಹಾಗೆ ಇರಲಿದೆ. ಚುನಾವಣೆ ಬಂದಾಗೆಲ್ಲ ಗಡಿ ವಿವಾದ ಹುಟ್ಟಿಕೊಳ್ಳುತ್ತದೆ ಎಂದು ಸತೀಶ ಜಾರಕಿಹೊಳಿ ಕಿಡಿಕಾರಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…