2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಅನೌನ್ಸ್ ಆಗಿದೆ.
ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ರಕ್ಷಿತ್ ಶೆಟ್ಟಿ ಪಾಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಇನ್ನು ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.
ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.
ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಅಜಿತ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ.
ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ.
ಇನ್ನು ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ. ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ. ಸದ್ಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ ವಾಗಿದೆ.
ಕಳೆದ ಬಾರಿ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಕಿಂಗ್ ಸ್ಟಾರ್ ಯಶ್ ಪಡೆದುಕೊಂಡಿದ್ದರು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…