Featured

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.

ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಅನೌನ್ಸ್ ಆಗಿದೆ.

ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ರಕ್ಷಿತ್ ಶೆಟ್ಟಿ ಪಾಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಇನ್ನು ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.

ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.

ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಅಜಿತ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ.

ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ.

ಇನ್ನು ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ. ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ. ಸದ್ಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ ವಾಗಿದೆ.

ಕಳೆದ ಬಾರಿ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಕಿಂಗ್ ಸ್ಟಾರ್ ಯಶ್ ಪಡೆದುಕೊಂಡಿದ್ದರು

ಶಾಲೆ ಆರಂಭದ ಬಗ್ಗೆ ಸರ್ಕಾರಕ್ಕೆ ಇನ್ನೂ ಗೊಂದಲ ; ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ : ಯು.ಟಿ.ಖಾದರ್ -Vishwanews24

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

11 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

21 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

39 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

43 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

51 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago