Featured

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.

ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಅನೌನ್ಸ್ ಆಗಿದೆ.

ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ರಕ್ಷಿತ್ ಶೆಟ್ಟಿ ಪಾಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಇನ್ನು ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.

ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.

ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಅಜಿತ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ.

ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ.

ಇನ್ನು ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ. ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ. ಸದ್ಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ ವಾಗಿದೆ.

ಕಳೆದ ಬಾರಿ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಕಿಂಗ್ ಸ್ಟಾರ್ ಯಶ್ ಪಡೆದುಕೊಂಡಿದ್ದರು

ಶಾಲೆ ಆರಂಭದ ಬಗ್ಗೆ ಸರ್ಕಾರಕ್ಕೆ ಇನ್ನೂ ಗೊಂದಲ ; ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ : ಯು.ಟಿ.ಖಾದರ್ -Vishwanews24

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago