2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಅನೌನ್ಸ್ ಆಗಿದೆ.
ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ರಕ್ಷಿತ್ ಶೆಟ್ಟಿ ಪಾಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಇನ್ನು ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.
ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.
ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಅಜಿತ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ.
ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ.
ಇನ್ನು ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ. ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ. ಸದ್ಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ ವಾಗಿದೆ.
ಕಳೆದ ಬಾರಿ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಕಿಂಗ್ ಸ್ಟಾರ್ ಯಶ್ ಪಡೆದುಕೊಂಡಿದ್ದರು
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…