Featured

ಹ್ಯಾಲೋವೀನ್  ದುರಂತ : ದಕ್ಷಿಣ ಕೊರಿಯಾದ ಖ್ಯಾತ ನಟ, ಗಾಯಕ ಲೀ ಜಿಹಾನ್ ಸಾವು – Vishwanews24

ಹ್ಯಾಲೋವೀನ್  ದುರಂತ : ದಕ್ಷಿಣ ಕೊರಿಯಾದ ಖ್ಯಾತ ನಟ, ಗಾಯಕ ಲೀ ಜಿಹಾನ್ ಸಾವು

ಸಿಯೋಲ್: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ  ಶನಿವಾರ ನಡೆದ ಹ್ಯಾಲೋವೀನ್  ದುರಂತದಲ್ಲಿ ಮೃತಪಟ್ಟವರ ಗುಂಪಿನಲ್ಲಿ ಖ್ಯಾತ ಗಾಯಕ ಹಾಗೂ ನಟನೊಬ್ಬನೂ ಸೇರಿದ್ದ ಎಂಬ ಸುದ್ದಿ ತಿಳಿದು ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಯೋಲ್‌ನ ಇಟಾವಾನ್  ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ  ನಟ, ಗಾಯಕ ಲೀ ಜಿಹಾನ್ ಮೃತಪಟ್ಟಿರುವುದಾಗಿ ದೃಢವಾಗಿದೆ. 24 ವರ್ಷದ ತಾರೆಯ ಹಠಾತ್ ನಿಧನಕ್ಕೆ ಅವರ ಕುಟುಂಬ, ಅಭಿಮಾನಿಗಳು ಸೇರಿದಂತೆ ಅಲ್ಲಿನ ಜನತೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಲೀ ಜಿಹಾನ್ ಅವರು ದಕ್ಷಿಣ ಕೊರಿಯಾದ ಗಾಯನ ಸ್ಪರ್ಧೆಯ ಪ್ರೊಡ್ಯೂಸ್ 101 ರಲ್ಲಿ ಮಾಜಿ ಸ್ಪರ್ಧಿಯಾಗಿದ್ದಾರೆ. ಅವರು ಟುಡೇ ವಾಸ್ ಅನದರ್ ನಾಮ್ ಹ್ಯುನ್ ಡೇ ಮೂಲಕ ನಟನಾ ಕ್ಷೇತಕ್ಕೆ ಪಾದಾರ್ಪಣೆ ಮಾಡಿದರು. ವರದಿಗಳ ಪ್ರಕಾರ, ಲೀ ಜಿ ಹಾನ್ ಅವರ ಅಂತ್ಯಕ್ರಿಯೆ ನವೆಂಬರ್ 1 ರಂದು ನಡೆಯಲಿದೆ. ಇದನ್ನೂ ಓದಿ: ಮಂಗಳೂರು: ಹೃದಯಾಘಾತದಿಂದ ಯುವಕ ನಿಧನ – Vishwanews24

2 ವರ್ಷದ ಕೋವಿಡ್ ನಿರ್ಬಂಧವನ್ನು ತೆಗೆದು ಹಾಕಿದ ಬಳಿಕ ಇದು ದಕ್ಷಿಣ ಕೊರಿಯಾದ ಮೊದಲ ಹ್ಯಾಲೋವೀನ್ ಆಚರಣೆಯಾಗದೆ. ಶನಿವಾರ ಹಬ್ಬದ ವಾತಾವರಣದಲ್ಲಿ ಇಟಾವಾನ್‌ನ ಕಿರಿದಾದ ಒಂದು ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಹೆಚ್ಚಿನವರು ಉಸಿರುಗಟ್ಟಿ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರಲ್ಲಿ ಹೆಚ್ಚಿನವರು 20 ವರ್ಷದ ಆಸುಪಾಸಿನವರು ಎಂಬುದು ಇನ್ನಷ್ಟು ಆಘಾತ ತಂದಿದೆ.

ವರದಿಗಳ ಪ್ರಕಾರ ಸಿಯೋಲ್‌ನ ಹ್ಯಾಲೋವೀನ್ ದುರಂತದಲ್ಲಿ 151 ಜನರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್-ಯೋಲ್ ರಾಷ್ಟ್ರೀಯ ಶೋಕಾಚರಣೆಯ ಅವಧಿಯನ್ನು ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ವಿಟ್ಲ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಮುಡಿಪುವಿನಲ್ಲಿ ಪತ್ತೆ – Vishwanews24

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago