Featured

₹ 59 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಣಿಪಾಲ ಪೆರಂಪಳ್ಳಿ ರಸ್ತೆ ಉದ್ಘಾಟಿಸಿದ ಶಾಸಕ ಯಶ್ಪಾಲ್ ಸುವರ್ಣ – vishwanews24

₹ 59 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಣಿಪಾಲ ಪೆರಂಪಳ್ಳಿ ರಸ್ತೆ ಉದ್ಘಾಟಿಸಿದ ಶಾಸಕ ಯಶ್ಪಾಲ್ ಸುವರ್ಣ

ಮಣಿಪಾಲ: ಅಂಬಾಗಿಲು ಮಣಿಪಾಲ ಮುಖ್ಯರಸ್ತೆ ಪೆರಂಪಳ್ಳಿ ಸಾಯಿರಾಧ ಗ್ರೀನ್ ವ್ಯಾಲಿ ಬಳಿ 59 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ರಸ್ತೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಹಲವು ವರ್ಷಗಳಿಂದ ತಾಂತ್ರಿಕ ಕಾರಣಗಳಿಂದ ನಿರ್ವಹಣೆ ಇಲ್ಲದೆ ಸಂಪೂರ್ಣ ಹದಗೆಟ್ಟಿದ್ದ ರಸ್ತೆಯಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಉಡುಪಿ ಕ್ಷೇತ್ರಕ್ಕೆ ಮಂಜೂರಾದ ಲೋಕೋಪಯೋಗಿ ಇಲಾಖೆ ಅನುದಾನವನ್ನು ಈ ರಸ್ತೆಗೆ ಮೀಸಲಿರಿಸಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ನಗರದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೆರಂಪಳ್ಳಿ ಫಾತಿಮಾ ಚರ್ಚ್ ಧರ್ಮ ಗುರುಗಳಾದ ವಿಶಾಲ್ ಲೋಬೊ ಮಾತನಾಡಿ ಪೆರಂಪಳ್ಳಿ ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಣಿಪಾಲ ಅಂಬಾಗಿಲು ರಸ್ತೆಯ ಕಾಂಕ್ರಿಟೀಕರಣ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಶಾಸಕರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೂಡು ಪೆರಂಪಳ್ಳಿ ವಾರ್ಡಿನ ನಗರಸಭಾ ಮಾಜಿ ಸದಸ್ಯರಾದ ಶ್ರೀಮತಿ ಅನಿಟಾ ಬೆಲಿಂಡ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಕಿರಣ್ ಕುಮಾರ್ ಬೈಲೂರು, ನಗರಸಭಾ ಮಾಜಿ ಸದಸ್ಯರಾದ ಶ್ರೀಮತಿ ಭಾರತಿ ಪ್ರಶಾಂತ, ಶ್ರೀ ಗಿರಿಧರ ಆಚಾರ್ಯ, ಶ್ರೀ ಮಂಜುನಾಥ ಮಣಿಪಾಲ, ಶ್ರೀ ಟಿ. ಜಿ. ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಮುಖಂಡರಾದ ಶ್ರೀ ವಾಸುದೇವ ಭಟ್ ಪೆರಂಪಳ್ಳಿ, ಪಕ್ಷದ ಪ್ರಮುಖರಾದ ಶ್ರೀ ಶಶಾಂಕ್ ಶಿವತ್ತಾಯ, ಶ್ರೀಮತಿ ಸುಮ ಆರ್, ಶ್ರೀ ಪ್ರಶಾಂತ್ ಭಟ್, ಶ್ರೀ ಡೆನ್ನಿಸ್ ಮಸ್ಕರೇನ್ಹಸ್, ಉಲ್ಲಾಸ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಶಂಕರ್ ಕುಲಾಲ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Vishwa News 24

Recent Posts

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

14 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

3 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

3 hours ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

4 hours ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

4 hours ago