ಮಣಿಪಾಲ: ಅಂಬಾಗಿಲು ಮಣಿಪಾಲ ಮುಖ್ಯರಸ್ತೆ ಪೆರಂಪಳ್ಳಿ ಸಾಯಿರಾಧ ಗ್ರೀನ್ ವ್ಯಾಲಿ ಬಳಿ 59 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ರಸ್ತೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಹಲವು ವರ್ಷಗಳಿಂದ ತಾಂತ್ರಿಕ ಕಾರಣಗಳಿಂದ ನಿರ್ವಹಣೆ ಇಲ್ಲದೆ ಸಂಪೂರ್ಣ ಹದಗೆಟ್ಟಿದ್ದ ರಸ್ತೆಯಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಉಡುಪಿ ಕ್ಷೇತ್ರಕ್ಕೆ ಮಂಜೂರಾದ ಲೋಕೋಪಯೋಗಿ ಇಲಾಖೆ ಅನುದಾನವನ್ನು ಈ ರಸ್ತೆಗೆ ಮೀಸಲಿರಿಸಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ನಗರದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೆರಂಪಳ್ಳಿ ಫಾತಿಮಾ ಚರ್ಚ್ ಧರ್ಮ ಗುರುಗಳಾದ ವಿಶಾಲ್ ಲೋಬೊ ಮಾತನಾಡಿ ಪೆರಂಪಳ್ಳಿ ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಣಿಪಾಲ ಅಂಬಾಗಿಲು ರಸ್ತೆಯ ಕಾಂಕ್ರಿಟೀಕರಣ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಶಾಸಕರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೂಡು ಪೆರಂಪಳ್ಳಿ ವಾರ್ಡಿನ ನಗರಸಭಾ ಮಾಜಿ ಸದಸ್ಯರಾದ ಶ್ರೀಮತಿ ಅನಿಟಾ ಬೆಲಿಂಡ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಕಿರಣ್ ಕುಮಾರ್ ಬೈಲೂರು, ನಗರಸಭಾ ಮಾಜಿ ಸದಸ್ಯರಾದ ಶ್ರೀಮತಿ ಭಾರತಿ ಪ್ರಶಾಂತ, ಶ್ರೀ ಗಿರಿಧರ ಆಚಾರ್ಯ, ಶ್ರೀ ಮಂಜುನಾಥ ಮಣಿಪಾಲ, ಶ್ರೀ ಟಿ. ಜಿ. ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಮುಖಂಡರಾದ ಶ್ರೀ ವಾಸುದೇವ ಭಟ್ ಪೆರಂಪಳ್ಳಿ, ಪಕ್ಷದ ಪ್ರಮುಖರಾದ ಶ್ರೀ ಶಶಾಂಕ್ ಶಿವತ್ತಾಯ, ಶ್ರೀಮತಿ ಸುಮ ಆರ್, ಶ್ರೀ ಪ್ರಶಾಂತ್ ಭಟ್, ಶ್ರೀ ಡೆನ್ನಿಸ್ ಮಸ್ಕರೇನ್ಹಸ್, ಉಲ್ಲಾಸ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಶಂಕರ್ ಕುಲಾಲ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…