ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದಡಿ ಬಂಟ್ವಾಳ ನಿಲ್ದಾಣವನ್ನು ಆಧುನೀಕರಿಸಲಾಗಿದೆ. ನೈಋತ್ಯ ರೈಲ್ವೆ ವಲಯದಲ್ಲಿ ಈ ಯೋಜನೆಯಡಿ ಅಭಿವೃದ್ಧಿಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.
ನವೀಕರಣದ ಭಾಗವಾಗಿ ಕಾಯುವಿಕೆ ಕೊಠಡಿ, ಟಿಕೆಟ್ ಕೌಂಟರ್ಗಳು, ಸುಧಾರಿತ ಆಸನ ವ್ಯವಸ್ಥೆ, ಪ್ರತ್ಯೇಕ ವಾಹನ ನಿಲುಗಡೆ ಹಾಗೂ ಪಿಕಪ್-ಡ್ರಾಪ್ ವಲಯಗಳನ್ನು ನಿರ್ಮಿಸಲಾಗಿದೆ. ಜೊತೆಗೆ ಫ್ಲಾಟ್ಫಾರ್ಮ್ ಶೆಲ್ಟರ್ಗಳು, ಎಲ್ಇಡಿ ದೀಪಗಳು, ಆಧುನಿಕ ಪೀಠೋಪಕರಣಗಳು ಮತ್ತು ಸುಂದರ ಪ್ರವೇಶ-ನಿರ್ಗಮನ ದ್ವಾರಗಳು ನಿಲ್ದಾಣದ ಸೌಂದರ್ಯವನ್ನು ಹೆಚ್ಚಿಸಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮಾಹಿತಿ ಫಲಕಗಳು, ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಹಾಗೂ ಗಡಿಯಾರಗಳನ್ನು ಅಳವಡಿಸಲಾಗಿದೆ. ದೇಶಾದ್ಯಂತ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾದ 75 ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಅವರು ಜುಲೈ 17ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…