Featured

01-01-2022 : ಇಂದಿನ ದಿನ ಭವಿಷ್ಯ-Vishwanews24

01-01-2022 : ಇಂದಿನ ದಿನ ಭವಿಷ್ಯ-Vishwanews24

ಮೇಷ : ಹಳೆಯ ಸಾಲಗಳು ತೀರುವುದರಿಂದ ನಿಮ್ಮ ಹಣಕಾಸಿನ ಸಮಸ್ಯೆಗಳು ನೀಗಲಿದೆ. ನಿಮ್ಮ ಪ್ರೇಮ ಪ್ರಕರಣವನ್ನು ಎಲ್ಲರ ಎದುರು ಸಾರಬೇಡಿ. ಮುಂದೆ ಇದು ನಿಮಗೆ ಮಾರಕ ಎನಿಸಲಿದೆ.

ವೃಷಭ : ಇಂದು ಸಹೋದ್ಯೋಗಿಗಳ ಜೊತೆ ಮೋಜು ಮಸ್ತಿ ಮಾಡಲಿದ್ದೀರಿ. ಇದರಿಂದ ನಿಮ್ಮ ಸಮಯ ವ್ಯರ್ಥವಾಗಲಿದೆ. ವೈವಾಹಿಕ ಜೀವನದಲ್ಲಿ ಅಡ್ಡಿ ಆತಂಕಗಳು ಎದುರಾಗಲಿವೆ.

ಮಿಥುನ: ಇಂದು ನಿಮಗೆ ಆರೋಗ್ಯ ಕೈ ಕೊಡುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯು ನಿಮ್ಮ ಮಾತನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂಬ ಕೊರಗು ನಿಮ್ಮನ್ನು ಇನ್ನಷ್ಟು ಕಾಡಲಿದೆ. ವಿದ್ಯಾರ್ಥಿಗಳಿಗೆ ಇಂದು ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ.

ಕಟಕ : ಇಂದು ನೀವು ಆಧ್ಯಾತ್ಮಿಕ ಜೀವನದತ್ತ ಹೆಚ್ಚು ವಾಲುವ ಸಾಧ್ಯತೆ ಇದೆ. ಮಕ್ಕಳು ನಿಮ್ಮ ಮುಂದೆ ಅನೇಕ ಬೇಡಿಕೆಗಳನ್ನು ಇಡುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದನ್ನು ರೂಢಿಸಿಕೊಳ್ಳಿ.

ಸಿಂಹ : ನಿಮ್ಮ ವೈಯಕ್ತಿಕ ವಿಚಾರಗಳನ್ನು ತೀರಾ ಇನ್ನೊಬ್ಬರ ಎದುರು ಹೇಳಿಕೊಳ್ಳಬೇಡಿ. ಪ್ರವಾಸ ಕೈಗೊಳ್ಳುವುದರಿಂದ ನಿಮಗೆ ನಿರಾಳ ಎನಿಸಲಿದೆ. ಸಣ್ಣ ಸಣ್ಣ ವಿಷಯಕ್ಕೆ ಸಂಗಾತಿಯನ್ನು ಟೀಕೆ ಮಾಡಬೇಡಿ.

ಕನ್ಯಾ : ಕಚೇರಿಯಲ್ಲಿ ಯಾರನ್ನೋ ಮೆಚ್ಚಿಸಲು ಕೆಲಸ ಮಾಡಲು ಹೋಗಬೇಡಿ. ನಿಮ್ಮ ಬುದ್ಧಿ ಶಕ್ತಿಯಿಂದ ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತ ಕೆಲಸಗಳನ್ನು ಮಾಡಿ. ಸಂಗಾತಿಯು ದೂರ ಇರುವುದರಿಂದ ಒಂಟಿತನ ನಿಮ್ಮನ್ನು ಇಂದು ತುಸು ಹೆಚ್ಚೇ ಕಾಡಲಿದೆ.

ತುಲಾ : ಅತಿಯಾದ ಕೋಪ ಸಂಗಾತಿಯ ಜೊತೆ ದೊಡ್ಡ ಸಂಘರ್ಷಕ್ಕೆ ನಾಂದಿ ಹಾಡಲಿದೆ. ಹಣಕಾಸಿನ ಸಂಕಷ್ಟವು ತಪ್ಪಿದ್ದಲ್ಲ. ಖರ್ಚಿನ ವಿಚಾರದಲ್ಲಿ ಉದಾರ ಬುದ್ಧಿಯನ್ನು ಬಿಟ್ಟಲ್ಲಿ ನಿಮಗೇ ಒಳ್ಳೆಯದು.

ವೃಶ್ಚಿಕ : ಬಹಳ ದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯವು ಇಂದು ಪೂರ್ಣಗೊಳ್ಳಲಿದೆ. ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ನಿಮ್ಮನ್ನು ತಲುಪಲಿದೆ. ಕಚೇರಿ ಕೆಲಸದ ನಿಮಿತ್ತ ಪ್ರವಾಸ ಕೈಗೊಳ್ಳುವಿರಿ.

ಧನು : ನಿಮ್ಮ ಸಂಗಾತಿಯು ಇಂದು ವೃತ್ತಿ ಜೀವನದಲ್ಲಿ ದೊಡ್ಡ ಸಾಧನೆಯನ್ನೇ ಮಾಡಲಿದ್ದಾರೆ. ಇದು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸಲಿದೆ.

ಮಕರ : ಇಂದು ನೀವು ರಾಜಕೀಯ ವ್ಯಕ್ತಿಗಳನ್ನು ಮೊದಲ ಬಾರಿಗೆ ಭೇಟಿ ಮಾಡೋದ್ರಿಂದ ನಿಮ್ಮಲ್ಲಿ ಕೊಂಚ ಅಳುಕಂತೂ ಇರಲಿದೆ. ತೀರಾ ಗಾಬರಿಯಾಗುವ ಅಗತ್ಯವಿಲ್ಲ.

ಕುಂಭ : ತಂದೆಯ ಸಲಹೆಯು ನಿಮ್ಮನ್ನು ಬಹುದೊಡ್ಡ ನಷ್ಟದಿಂದ ಕಾಪಾಡಲಿದೆ. ಹೊಸ ಸ್ನೇಹಿತರು ಇಂದು ನಿಮ್ಮನ್ನು ಭೇಟಿಯಾಗಲಿದ್ದಾರೆ. .

ಮೀನ : ಮಕ್ಕಳ ಶಿಕ್ಷಣದ ದೃಷ್ಟಿಯಿಂದ ದೊಡ್ಡ ಮೊತ್ತದ ಹಣವನ್ನು ಹೊಂದಿಸಬೇಕಾಗಿ ಬರುತ್ತದೆ. ಸಂಗಾತಿಯೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

6 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

12 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago